Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...