Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...