HomeUncategorizedFact Check: ಕರ್ನಾಟಕದ ಬರ ಪರಿಹಾರ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಸುಳ್ಳು

Fact Check: ಕರ್ನಾಟಕದ ಬರ ಪರಿಹಾರ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಸುಳ್ಳು

- Advertisement -
- Advertisement -

ಏಪ್ರಿಲ್ 2,2024 ರಂದು ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ “ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದೆ. ಆದರೆ, ಈಗ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲವೆಂದು ಹೇಳುತ್ತಿದೆ. ಇದು ರಾಜಕೀಯ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಾ ಸೀತಾರಾಮನ್ ಅವರು, “ಕೇಂದ್ರದಿಂದ ಕರ್ನಾಟಕಕ್ಕೆ ಕೊಡಬೇಕಿದ್ದ ಒಂದೊಂದು ಪೈಸೆಯನ್ನೂ ಸರಿಯಾದ ಸಮಯಕ್ಕೆ ಕೊಟ್ಟಿದ್ದೇವೆ” ಎಂದು ಹೇಳಿದ್ದರು.

ಹಾಗಿದ್ದರೆ, ಗೃಹ ಸಚಿವ ಅಮಿತ್ ಶಾ ಅವರು ಹೇಳಿದಂತೆ ರಾಜ್ಯ ಸರ್ಕಾರ ಬರ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದೆಯಾ? ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಸೇರಿದಂತೆ ಬರಬೇಕಿರುವ ಎಲ್ಲಾ ಹಣ ಬಂದಿದೆಯಾ? ಎಂದು ನೋಡೋಣಾ.

ಫ್ಯಾಕ್ಟ್‌ಚೆಕ್ : ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಏಪ್ರಿಲ್ 2ರಂದು ಮಾಧ್ಯಮ ಪ್ರಕಟನೆಯ ಮೂಲಕ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಸಚಿವರ ಪ್ರಕಟನೆ ಹೀಗಿದೆ.. “ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು, ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗಾಗಿ ಕಳೆದ ವರ್ಷ ಆಗಸ್ಟ್ ಎರಡನೇ ವಾರದಲ್ಲೇ ಸಮೀಕ್ಷೆ ನಡೆಸಿ ಕೇಂದ್ರದ ಮಾನದಂಡದ ಪ್ರಕಾರ ಸೆಪ್ಟೆಂಬರ್ 13 ರಂದೇ ಬರ ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 195 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 28 ತಾಲೂಕುಗಳೂ ಸೇರಿ ಒಟ್ಟು 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು.

ಕಳೆದ ವರ್ಷ ಸೆ.22ಕ್ಕೆ 18,200 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಮೊದಲ ಮನವಿ (ಮೆಮೊರಾಂಡಂ) ಸಲ್ಲಿಸಲಾಯಿತು. ಒಂದು ವಾರದ ಅವಧಿಯಲ್ಲಿ ಬರ ಪರಿಹಾರ ಕೋರಿ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ

ಕಳೆದ ವರ್ಷ ದೇಶದ ಹಲವು ರಾಜ್ಯಗಳು ಬರಕ್ಕೆ ತುತ್ತಾಗಿದ್ದವು. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ, ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಹಾಗೂ 18 ರಾಜ್ಯಗಳಲ್ಲಿ ಹಿಂಗಾರಿನ ಬರ ಇತ್ತು. ಆದರೆ, ಈ ಯಾವ ರಾಜ್ಯಗಳೂ ‘ಬರ’ ಘೋಷಣೆ ಮಾಡುವ ಮುನ್ನವೇ ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಿತ್ತು.

ಕರ್ನಾಟಕದ ಬರ ಪರಿಹಾರ ಮನವಿಯ ಮೇರೆಗೆ ಕೇಂದ್ರದ ಬರ ಅಧ್ಯಯನ ತಂಡ ಕಳೆದ ವರ್ಷ ಅಕ್ಟೋಬರ್ 06 ರಂದು ರಾಜ್ಯಕ್ಕೆ ಆಗಮಿಸಿತ್ತು. ಮೂರು ತಂಡಗಳಾಗಿ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಂಡ ತಂಡ, ಬರ ಅಧ್ಯಯನ ನಡೆಸಿತ್ತು. ಅಲ್ಲದೆ, ಬರ ಅಧ್ಯಯನದ ನಂತರ ರಾಜ್ಯ ಸರ್ಕಾರದ ಜೊತೆಗೂ ಅಕ್ಟೋಬರ್ 09 ರಂದು ಸಭೆ ನಡೆಸಿದ್ದ ಕೇಂದ್ರದ ತಂಡ ನಾವು ಮಾಡಿದ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ತಿಳಿಸಿತ್ತು. ಈ ಬಗ್ಗೆ ಅದೇ ದಿನ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮ ಮಿತ್ರರಿಗೂ ಮಾಹಿತಿ ನೀಡಲಾಗಿತ್ತು.

ಅಧ್ಯಯನದ ಬೆನ್ನಿಗೆ ದೆಹಲಿಗೆ ಹಿಂತಿರುಗಿದ ಬರ ಅಧ್ಯಯನ ತಂಡ, ಕೇಂದ್ರಕ್ಕೆ ಒಂದು ವಾರದಲ್ಲೇ ವರದಿಯನ್ನೂ ಸಲ್ಲಿಸಿದೆ. ಎನ್‌ಆರ್‌ಎಫ್‌ ನಿಯಮದ ಅನ್ವಯ ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ ತಕ್ಷಣ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರು ಹಾಗೂ ಕೃಷಿ ಸಚಿವರು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ, ಆ ಸಭೆ ಈವರೆಗೂ ನಡೆದಿಲ್ಲ ಎಂಬುವುದೇ ವಾಸ್ತವ ಸಂಗತಿ.

ರಾಜ್ಯದ ರೈತರು ಬರದಿಂದ ತತ್ತರಿಸುತ್ತಿದ್ದಾರೆ. ಹೀಗಾಗಿ, ಶೀಘ್ರ ಬರ ಪರಿಹಾರ ವಿತರಿಸಿ ಎಂದು ಮನವಿ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡದ ಕಾರಣ ಕಳೆದ ವರ್ಷ ಅಕ್ಟೋಬರ್ 25ರಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೊಳಗೊಂಡ ನಿಯೋಗದೊಂದಿಗೆ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು.

ಸುದ್ದಿ ಲಿಂಕ್ ಇಲ್ಲಿದೆ

ಈ ನಡುವೆ ಇದೇ ಅವಧಿಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರ ಭೇಟಿಗೆ ಅವಕಾಶ ಕೋರಿ ಎರಡು ಪತ್ರ ಬರೆದಿದ್ದರು. ಆದರೆ, ಅವರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ.

ಕಳೆದ ವರ್ಷ ನವೆಂಬರ್ 24ರಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗಿತ್ತು. ಅಲ್ಲದೆ, ಶೀಘ್ರ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸಚಿವರು ಚರ್ಚೆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರಾದರೂ, ಇದರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿರಲಿಲ್ಲ.

ಕಳೆದ ವರ್ಷ ಡಿಸೆಂಬರ್ 19 ರಂದು ಕೊನೆಗೂ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆಗೆ ನಾನೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಸಭೆಯಲ್ಲಿ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ವಿವರಿಸಲಾಗಿತ್ತು. ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆಗೂ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ.

 ಸುದ್ದಿ ಲಿಂಕ್ 

ಹೀಗಾಗಿ ಕರ್ನಾಟಕ ಸರ್ಕಾರ ಬೇರೆ ದಾರಿ ಕಾಣದೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದಿಂದ ಬರ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಈ ಕ್ಷಣದ ವರೆಗೆ ಸಾಂವಿಧಾನಿಕ ಮಾದರಿಯಲ್ಲಿ ಹೋರಾಟ ನಡೆಸುತ್ತಿದೆಯೇ ವಿನಃ ಈ ವಿಚಾರದಲ್ಲಿ ರಾಜಕೀಯ ಮಾಡಿರಲಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮೇಲಾಟ ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ರೈತರಿಗೆ ನೆರವು ನೀಡುವ ವಿಚಾರದಲ್ಲಿ ರಾಜಕೀಯ ಸರಿಯಲ್ಲ…!

ಸುದ್ದಿ ಲಿಂಕ್ ಇಲ್ಲಿದೆ

ಆದರೆ, ತೆರಿಗೆ ಹಂಚಿಕೆ, ವಿಶೇಷ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ರೈತರಿಗೆ ಬರ ಪರಿಹಾರ ನೀಡುವ ವಿಚಾರವನ್ನೂ ಕೇಂದ್ರ ಸರ್ಕಾರ ರಾಜಕೀಯಗೊಳಿಸಿ ಕರ್ನಾಟಕವನ್ನು ಶೋಷಣೆಗೆ ಈಡು ಮಾಡುತ್ತದೆ ಎಂದು ನಾವು ಭಾವಿಸಿರಲಿಲ್ಲ. ಇನ್ನೂ ಜನರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಹಸಿ ಹಸಿ ಸುಳ್ಳು ಹೇಳುತ್ತಾರೆ ಎಂದು ನಾವು ಖಂಡಿತ ಭಾಸಿರಲಿಲ್ಲ. ಅವರ ಈ ವರ್ತನೆಗೆ ನಾನು ವಿಷಾದಿಸುತ್ತೇವೆ.

ಇವಿಷ್ಟು ಅಮಿತ್ ಶಾ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣಬೈರೇಗೌಡರು ನೀಡಿರುವ ಮಾಹಿತಿ. ಕಳೆದ ತಿಂಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಪ ಮಾಡಿದ್ದಾಗಲೂ ಕೃಷ್ಣಬೈರೇಗೌಡರು ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಮುಂದಿಟ್ಟಿದ್ದರು.

ಸಚಿವರು ನೀಡಿರುವ ಮಾಹಿತಿ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವಿಸ್ಕೃತ ವರದಿಗಳ ಲಿಂಕ್ ಕೆಳಗೆ ಇದೆ.

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ಕರ್ನಾಟಕಕ್ಕೆ ಬರ ಬೇಕಿರುವ ಎಲ್ಲಾ ಹಣ ಬಂದಿದೆಯಾ?

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ

ಸಚಿವರು ನೀಡಿರುವ ಸ್ಪಷ್ಟೀಕರಣಕ್ಕೆ ಪುಷ್ಠಿ ನೀಡುವ ಮಾಧ್ಯಮ ವರದಿಗಳನ್ನು ನಾವು ಈ ವರದಿಯ ಪ್ಯಾರಾಗ್ರಾಫ್‌ಗಳ ನಡುವೆ ಲಗತ್ತಿಸಿದ್ದೇವೆ. ಕಂದಾಯ ಸಚಿವರ ವಿವರಣೆ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...