Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

- Advertisement -
- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿರುವ ಟಿ ಶರ್ಟ್‌ಧರಿಸಿ ಭಾಷಣ ಮಾಡಿದ್ದಾರೆ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ಅನೇಕ ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು, ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿದ್ದ ಬಿಳಿ ಬಣ್ಣದ ಟಿ ಶರ್ಟ್‌ ಧರಿಸಿ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಪೋಟೋ ಹಂಚಿಕೊಂಡಿದ್ದಾರೆ.

“ರಾಹುಲ್ ಗಾಂಧಿ ಬಿಜೆಪಿಯ ಏಜೆಂಟ್ ಎಂದು ನಾವು ಮೊದಲೇ ಹೇಳಿದ್ದೆವು, ಇದೀಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ ನೋಡಿ” ಎಂದು ಫೋಟೋದ ಜೊತೆಗೆ ಕೆಲವರು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಮೊದಲು ನಾವು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಅಧಿಕೃತ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ ಅದರಲ್ಲಿ ಎಲ್ಲೂ ರಾಹುಲ್ ಗಾಂಧಿ ಬಿಜೆಪಿ ಚಿಹ್ನೆ ಹೊಂದಿದ್ದ ಟಿ ಶರ್ಟ್‌ ಧರಿಸಿದ್ದ ಫೋಟೋ ಕಂಡು ಬಂದಿಲ್ಲ.

ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ನಾವು ಈ ಫೋಟೋ ಕುರಿತು ಹುಡುಕಿದ್ದೇವೆ. ಅಲ್ಲಿ ಜನವರಿ 14ರಂದು ಸಂಜೆ 5:07 ಗಂಟೆಗೆ ‘Amock(@Politics_2022_)’ ಎಂಬ ಎಕ್ಸ್‌ ಖಾತೆಯಲ್ಲಿ ಮೇಲಿನ ಪೋಸ್ಟ್‌ ಆಗಿರುವುದು ಕಂಡು ಬಂದಿದೆ. ಅದರಲ್ಲಿ ರಾಹುಲ್ ಗಾಂಧಿ ಧರಿಸಿದ್ದ ಟಿ ಶರ್ಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ಕಂಡು ಬಂದಿಲ್ಲ.

ವೈರಲ್‌ ಫೋಟೋವನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಕೆಲ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ತಂಡದ ಮುಖ್ಯಸ್ಥೆ ಮತ್ತು ಎಐಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಪ್ರಿಯಾ ಶ್ರೀನಾಥೆ ಅವರ ಎಕ್ಸ್‌ ಖಾತೆಯಲ್ಲಿ ಫೋಟೋ ಕಂಡು ಬಂದಿದೆ. ಜನವರಿ 14ರಂದು ಸಂಜೆ 4:38 ಗಂಟೆಗೆ ಈ ಫೋಟೋವನ್ನು ಸುಪ್ರಿಯಾ ಶ್ರೀನಾಥೆ ಪೋಸ್ಟ್‌ ಮಾಡಿದ್ದು, “ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯ ಬಗ್ಗೆ ಮಾತನಾಡುವಾಗ, ಅದು ಮಣಿಪುರದಿಂದ ಪ್ರಾರಂಭವಾಗಬಹುದು ಎಂದು ನಾನು ಹೇಳಿದ್ದೆ” ಎಂದು ಬರೆದುಕೊಂಡಿದ್ದಾರೆ.

ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಶಿಕ್ಷಣ, ಮಹಿಳೆಯರು, ಮಕ್ಕಳು, ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿ ಟಿ.ಎನ್ ಪ್ರತಾಪನ್ ಅವರು ಕೂಡ ಇದೇ ಫೋಟೋವನ್ನು ಜನವರಿ 14ರಂದು ಸಂಜೆ 4:44 ಗಂಟೆಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸುಪ್ರಿಯಾ ಶ್ರೀನಾಥೆಯಂತೆ ಬರೆದುಕೊಂಡಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆಯ ಕುರಿತು ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಫೋಟೋಗಳಲ್ಲಿ ಎಲ್ಲೂ ಟಿ ಶರ್ಟ್‌ ಮೇಲೆ ಬಿಜೆಪಿಯ ಚಿಹ್ನೆ ಕಂಡು ಬಂದಿಲ್ಲ.

ವೈರಲ್ ಫೋಟೋದ ಕುರಿತು ನಾವು ನಡೆಸಿದ ಪರಿಶೀಲನೆಯಲ್ಲಿ ಅದು ಎಡಿಟೆಡ್ ಫೋಟೋ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. I am next April-2024 going to retair from my job.I am a teacher at government high school.So I am not wish to take loan but you wish sanction loan to my, you will deducted by my pension amount.

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...