Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

- Advertisement -
- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿರುವ ಟಿ ಶರ್ಟ್‌ಧರಿಸಿ ಭಾಷಣ ಮಾಡಿದ್ದಾರೆ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ಅನೇಕ ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು, ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿದ್ದ ಬಿಳಿ ಬಣ್ಣದ ಟಿ ಶರ್ಟ್‌ ಧರಿಸಿ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಪೋಟೋ ಹಂಚಿಕೊಂಡಿದ್ದಾರೆ.

“ರಾಹುಲ್ ಗಾಂಧಿ ಬಿಜೆಪಿಯ ಏಜೆಂಟ್ ಎಂದು ನಾವು ಮೊದಲೇ ಹೇಳಿದ್ದೆವು, ಇದೀಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ ನೋಡಿ” ಎಂದು ಫೋಟೋದ ಜೊತೆಗೆ ಕೆಲವರು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಮೊದಲು ನಾವು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಅಧಿಕೃತ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ ಅದರಲ್ಲಿ ಎಲ್ಲೂ ರಾಹುಲ್ ಗಾಂಧಿ ಬಿಜೆಪಿ ಚಿಹ್ನೆ ಹೊಂದಿದ್ದ ಟಿ ಶರ್ಟ್‌ ಧರಿಸಿದ್ದ ಫೋಟೋ ಕಂಡು ಬಂದಿಲ್ಲ.

ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ನಾವು ಈ ಫೋಟೋ ಕುರಿತು ಹುಡುಕಿದ್ದೇವೆ. ಅಲ್ಲಿ ಜನವರಿ 14ರಂದು ಸಂಜೆ 5:07 ಗಂಟೆಗೆ ‘Amock(@Politics_2022_)’ ಎಂಬ ಎಕ್ಸ್‌ ಖಾತೆಯಲ್ಲಿ ಮೇಲಿನ ಪೋಸ್ಟ್‌ ಆಗಿರುವುದು ಕಂಡು ಬಂದಿದೆ. ಅದರಲ್ಲಿ ರಾಹುಲ್ ಗಾಂಧಿ ಧರಿಸಿದ್ದ ಟಿ ಶರ್ಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ಕಂಡು ಬಂದಿಲ್ಲ.

ವೈರಲ್‌ ಫೋಟೋವನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಕೆಲ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ತಂಡದ ಮುಖ್ಯಸ್ಥೆ ಮತ್ತು ಎಐಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಪ್ರಿಯಾ ಶ್ರೀನಾಥೆ ಅವರ ಎಕ್ಸ್‌ ಖಾತೆಯಲ್ಲಿ ಫೋಟೋ ಕಂಡು ಬಂದಿದೆ. ಜನವರಿ 14ರಂದು ಸಂಜೆ 4:38 ಗಂಟೆಗೆ ಈ ಫೋಟೋವನ್ನು ಸುಪ್ರಿಯಾ ಶ್ರೀನಾಥೆ ಪೋಸ್ಟ್‌ ಮಾಡಿದ್ದು, “ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯ ಬಗ್ಗೆ ಮಾತನಾಡುವಾಗ, ಅದು ಮಣಿಪುರದಿಂದ ಪ್ರಾರಂಭವಾಗಬಹುದು ಎಂದು ನಾನು ಹೇಳಿದ್ದೆ” ಎಂದು ಬರೆದುಕೊಂಡಿದ್ದಾರೆ.

ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಶಿಕ್ಷಣ, ಮಹಿಳೆಯರು, ಮಕ್ಕಳು, ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿ ಟಿ.ಎನ್ ಪ್ರತಾಪನ್ ಅವರು ಕೂಡ ಇದೇ ಫೋಟೋವನ್ನು ಜನವರಿ 14ರಂದು ಸಂಜೆ 4:44 ಗಂಟೆಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸುಪ್ರಿಯಾ ಶ್ರೀನಾಥೆಯಂತೆ ಬರೆದುಕೊಂಡಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆಯ ಕುರಿತು ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಫೋಟೋಗಳಲ್ಲಿ ಎಲ್ಲೂ ಟಿ ಶರ್ಟ್‌ ಮೇಲೆ ಬಿಜೆಪಿಯ ಚಿಹ್ನೆ ಕಂಡು ಬಂದಿಲ್ಲ.

ವೈರಲ್ ಫೋಟೋದ ಕುರಿತು ನಾವು ನಡೆಸಿದ ಪರಿಶೀಲನೆಯಲ್ಲಿ ಅದು ಎಡಿಟೆಡ್ ಫೋಟೋ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. I am next April-2024 going to retair from my job.I am a teacher at government high school.So I am not wish to take loan but you wish sanction loan to my, you will deducted by my pension amount.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...