Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...