Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...