Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...