Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...