Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...