Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...