Homeಫ್ಯಾಕ್ಟ್‌ಚೆಕ್Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನೆ ಮುಂದೆ ಬಸ್‌ ನಿಲ್ಲಿಸುವಂತೆ ಹೇಳಿದ್ದರು. ಆದರೆ, ಚಾಲಕ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದಾನೆ. ಈ ಕಾರಣಕ್ಕೆ ಮುಸ್ಲಿಂ ಪುರುಷರು ಬಸ್‌ಗೆ ಕಲ್ಲು ತೂರಿ ಹಾನಿಗೊಳಿಸಿದ್ದಾರೆ ಎಂದು ಹೇಳಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಸಂದೇಶದ ಜೊತೆಗೆ ಮುಸ್ಲಿಂ ಪುರುಷರ ಗುಂಪೊಂದು ಕಲ್ಲು ತೂರುವ ಮೂಲಕ ಬಸ್ಸಿನ ಗಾಜುಗಳನ್ನು ಹಾನಿಗೊಳಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ.

“ಬೆಂಗಳೂರು ಉಚಿತ ಬಸ್… ಮುಸ್ಲಿಂ ಮಹಿಳೆ ತನ್ನ ಮನೆಯ ಎದುರು ಬಸ್ ನಿಲ್ಲಿಸಲು ಹೇಳಿದಳು ಪಾಪ ಡ್ರೈವರ್ ನೇರ ಬಸ್ ಸ್ಟಾಂಡ್ ನಲ್ಲಿ ನಿಲ್ಲಿಸಿದ… ನಂತರ ಕತೆ ನೋಡಿ. ಸರ್ಕಾರದ ಆಸ್ತಿಗಳನ್ನ ಉಗ್ರಾಗಾಮಿಗಳಂತೆ ಹಾಳು ಮಾಡುವ ಇವರಿಗೆ ಯಾವ ಶಿಕ್ಷೆಯು ಇಲ್ಲಾ..ಇದು ನಮ್ಮ ಕರುನಾಡಿನ ದುರಂತ, ಯೋಗಿ ಆದಿತ್ಯನಾಥ ಅಂತ CM ನಾಯಕ ಯಾಕೆ ಬೇಕು ಅಂತ ಈಗ ಯೋ‍ಚಿಸಿ! ಕಾಂಗ್ರೆಸ್ ನ ಶಾಂತಿ ಧೂತ ಬ್ರದರ್ಸ್.” ಎಂದು ವೈರಲ್ ಸಂದೇಶದಲ್ಲಿ ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವೈರಲ್ ವಿಡಿಯೋದಲ್ಲಿರುವ ಬಸ್‌ನ ಬಣ್ಣ ನೀಲಿ ಆಗಿರುವುದರಿಂದ, ಅದು ಬೆಂಗಳೂರಿನ ಬಿಎಂಟಿಸಿ ವೋಲ್ವೋ ಬಸ್‌ ಎಂದು ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಕಲ್ಲು ತೂರಿರುವ ಯಾವುದೇ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿಲ್ಲ.

ನಾವು ಮತಷ್ಟು ಕೀ ವರ್ಡ್ಸ್, ಟೂಲ್‌ಗಳನ್ನು ಬಳಸಿಕೊಂಡು ಸರ್ಚ್ ಮಾಡಿದಾಗ, ಇದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಘಟನೆಯ ವಿಡಿಯೋ ಎಂದು ತಿಳಿದು ಬಂದಿದೆ.

ಜುಲೈ 5, 2019ರಲ್ಲಿ ಟಿವಿ9 ಗುಜರಾತಿ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ ಸುದ್ದಿಯಿದೆ. ಸುದ್ದಿ ಗುಜರಾತಿ ಭಾಷೆಯಲ್ಲಿರುವುದರಿಂದ ಆಂಗ್ಲ ಭಾಷೆಯಲ್ಲಿ ನೀಡಿರುವ “Rally against mob lynching incidents turns violent in Surat, stones pelted on buses” ಎಂಬ ಶೀರ್ಷಿಕೆಯನ್ನು ನಾವು ಗಮನಿಸಬಹುದು.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಘಟನೆಯ ಕುರಿತು ಜುಲೈ 6, 2019ರಂದು ಟೈಮ್ಸ್ ಆಫ್ ಇಂಡಿಯಾ “Surat:Rally against mob lynching turns violent” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಕಳೆದ ವರ್ಷ (2023)ರಲ್ಲಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ ಜಾರಿಗೊಳಿಸಿದಾಗಲೂ ಇದೇ ವಿಡಿಯೋವನ್ನು ಸುಳ್ಳು ಸಂದೇಶದೊಂದಿಗೆ ಹಂಚಿಕೊಳ್ಳಲಾಗಿತ್ತು.

ಆಗ ಏನ್‌ ಸುದ್ದಿ.ಕಾಂ ಎಂಬ ಕನ್ನಡದ ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು. ಅದರಲ್ಲೂ ಈ ವಿಡಿಯೋ ಗುಜರಾತ್‌ನಲ್ಲಿ ನಡೆದ ಘಟನೆಯದ್ದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವೈರಲ್ ವಿಡಿಯೋ ಬೆಂಗಳೂರಿನದ್ದಲ್ಲ, ಬದಲಾಗಿ ಗುಜರಾತ್‌ನ ಸೂರತ್‌ನಲ್ಲಿ ದೇಶದಾದ್ಯಂತ ನಡೆಯುತ್ತಿದ್ದ ಗುಂಪು ಹತ್ಯೆಯ ವಿರುದ್ದ ಪ್ರತಿಭಟಿಸಲು ಪೊಲೀಸರು ಅವಕಾಶ ನಿರಾಕರಿಸಿದಾಗ ಜನರು ಆಕ್ರೋಶ ವ್ಯಕ್ತಪಡಿಸಿದ್ದ ಘಟನೆಯದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...