Homeಫ್ಯಾಕ್ಟ್‌ಚೆಕ್Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

- Advertisement -
- Advertisement -

ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಭಾರೀ ಚರ್ಚೆಯಲ್ಲಿರುವ ಯೂಟ್ಯೂಬರ್ ‘ಧ್ರುವ್ ರಾಠೀ’. ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಸಾಗುತ್ತಿರುವ ಭಾರತದ ಆಡಳಿತ, ರಾಜಕೀಯ ವ್ಯವಸ್ಥೆಯ ಕುರಿತು ಬೆಳಕು ಚೆಲ್ಲುವ ವಿಡಿಯೋಗಳನ್ನು ಮಾಡುವ ಮೂಲಕ ‘ಧ್ರುವ್‌ ರಾಠೀ’ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ 16.8 ಮಿಲಿಯನ್ ಸೇರಿ ಮಾರ್ಚ್ 2024ರ ಹೊತ್ತಿಗೆ ಧ್ರುವ್ ರಾಠೀಯ ಎಲ್ಲಾ ಚಾನೆಲ್‌ಗಳ ಚಂದಾದಾರರ ಸಂಖ್ಯೆ ಸುಮಾರು 21.56 ಮಿಲಿಯನ್ ಆಗಿದೆ. ಒಟ್ಟು 4.1 ಬಿಲಿಯನ್ ವಿಡಿಯೋ ವೀಕ್ಷಣೆಗಳನ್ನು ಹೊಂದಿದ್ದಾರೆ.

ಇಂತಹ ಧ್ರುವ್ ರಾಠೀ ಪಾಕಿಸ್ತಾನ ಮೂಲದವರು, ಹಿಂದೂ ವಿರೋಧಿ, ಮೋದಿ ವಿರೋಧಿ ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

“ಧ್ರುವ್ ರಾಠೀ ಅವರ ನಿಜವಾದ ಹೆಸರು ಬದ್ರುದ್ದೀನ್ ಲಾಹೋರಿ. ಅವರು ಹುಟ್ಟಿರುವುದು ಪಾಕಿಸ್ತಾನದಲ್ಲಿ. ಅವರ ಪತ್ನಿ ಜೂಲಿ ಅವರು ಮೂಲತಃ ಮುಸ್ಲಿಂ. ಆಕೆಯ ನಿಜವಾದ ಹೆಸರು ಝುಲೈಕಾ. ಧ್ರುವ್ ಅವರು ಕರಾಚಿಯಲ್ಲಿರುವ ನಟೋರಿಯಸ್ ಗ್ಯಾಂಗ್‌ಸ್ಟರ್‌ ದಾವೂದ್ ಇಬ್ರಾಹಿಂನ ಅಲಿಶಾನ್ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ಅವರಿಗೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆಯ ವೈ + ಮತ್ತು ಝಡ್ + ಭದ್ರತೆಯನ್ನು ಒದಗಿಸಲಾಗುತ್ತಿದೆ” ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಫ್ಯಾಕ್ಟ್‌ಚೆಕ್ : ಧ್ರುವ್ ರಾಠಿಯ ಕುರಿತು ವೈರಲ್ ಸಂದೇಶಕ್ಕೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ನಾವು ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಸರ್ಚ್ ಮಾಡಿದಾಗ ವಿಕಿಪೀಡಿಯಲ್ಲಿ ಮಾಹಿತಿ ದೊರೆತಿದ್ದು, “ರಾಠೀ ಅವರು ಭಾರತದ ಹರಿಯಾಣ ರಾಜ್ಯದಲ್ಲಿ ಹಿಂದೂ ಜಾಟ್ ಕುಟುಂಬದಲ್ಲಿ ಜನಿಸಿದವರು. ಜರ್ಮನಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವ ಮೊದಲು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಯಾಣದಲ್ಲಿ ಪಡೆದರು. ಕಾರ್ಲ್ಸ್‌ರುಹೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ರಾಠೀ ಪದವಿ ಪಡೆದಿದ್ದಾರೆ. ನಂತರ ಅದೇ ಸಂಸ್ಥೆಯಿಂದ ನವೀಕರಿಸಬಹುದಾದ ಇಂಧನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ” ಎಂದು ಬರೆಯಲಾಗಿದೆ.

ವಿಕಿಪೀಡಿಯ ಲಿಂಕ್ ಇಲ್ಲಿದೆ 

ಧ್ರುವ್ ರಾಠೀಯ ಯೂಟ್ಯೂಬ್ ಪರಿಶೀಲಿಸಿದಾಗ ಅದರಲ್ಲಿ 16 ಮಾರ್ಚ್ 2023ರಂದು “The Real Story of Dhruv Rathee”ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ. ಈ ವಿಡಿಯೋದಲ್ಲಿ ಸ್ವತಃ ಧ್ರುವ್ ರಾಠೀ ಅವರೇ ತಾನು ಅಕ್ಟೋಬರ್ 1994ರಲ್ಲಿ ಹರಿಯಾಣದ ರೋಹ್ಟಕ್‌ನಲ್ಲಿ ಜನಿಸಿದೆ ಎಂದು ಹೇಳಿಕೊಂಡಿದ್ದಾರೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ಧ್ರುವ್ ರಾಠೀ ಅವರು ಜನಿಸಿದ್ದು ಭಾರತದ ಹರಿಯಾಣದ ರೋಹ್ಟಕ್‌ನಲ್ಲಿ ಎಂದು ತಿಳಿದು ಬಂದಿದೆ. ಹಾಗಾಗಿ, ಅವರು ಪಾಕಿಸ್ತಾನ ಮೂಲದವರು, ದಾವೂದ್ ಗ್ಯಾಂಗ್‌ನವರು ಎಂಬ ಸಂದೇಶವು ಸುಳ್ಳು.

ಇದನ್ನೂ ಓದಿ : Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...