Homeಫ್ಯಾಕ್ಟ್‌ಚೆಕ್Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

- Advertisement -
- Advertisement -

ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಭಾರೀ ಚರ್ಚೆಯಲ್ಲಿರುವ ಯೂಟ್ಯೂಬರ್ ‘ಧ್ರುವ್ ರಾಠೀ’. ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಸಾಗುತ್ತಿರುವ ಭಾರತದ ಆಡಳಿತ, ರಾಜಕೀಯ ವ್ಯವಸ್ಥೆಯ ಕುರಿತು ಬೆಳಕು ಚೆಲ್ಲುವ ವಿಡಿಯೋಗಳನ್ನು ಮಾಡುವ ಮೂಲಕ ‘ಧ್ರುವ್‌ ರಾಠೀ’ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ 16.8 ಮಿಲಿಯನ್ ಸೇರಿ ಮಾರ್ಚ್ 2024ರ ಹೊತ್ತಿಗೆ ಧ್ರುವ್ ರಾಠೀಯ ಎಲ್ಲಾ ಚಾನೆಲ್‌ಗಳ ಚಂದಾದಾರರ ಸಂಖ್ಯೆ ಸುಮಾರು 21.56 ಮಿಲಿಯನ್ ಆಗಿದೆ. ಒಟ್ಟು 4.1 ಬಿಲಿಯನ್ ವಿಡಿಯೋ ವೀಕ್ಷಣೆಗಳನ್ನು ಹೊಂದಿದ್ದಾರೆ.

ಇಂತಹ ಧ್ರುವ್ ರಾಠೀ ಪಾಕಿಸ್ತಾನ ಮೂಲದವರು, ಹಿಂದೂ ವಿರೋಧಿ, ಮೋದಿ ವಿರೋಧಿ ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

“ಧ್ರುವ್ ರಾಠೀ ಅವರ ನಿಜವಾದ ಹೆಸರು ಬದ್ರುದ್ದೀನ್ ಲಾಹೋರಿ. ಅವರು ಹುಟ್ಟಿರುವುದು ಪಾಕಿಸ್ತಾನದಲ್ಲಿ. ಅವರ ಪತ್ನಿ ಜೂಲಿ ಅವರು ಮೂಲತಃ ಮುಸ್ಲಿಂ. ಆಕೆಯ ನಿಜವಾದ ಹೆಸರು ಝುಲೈಕಾ. ಧ್ರುವ್ ಅವರು ಕರಾಚಿಯಲ್ಲಿರುವ ನಟೋರಿಯಸ್ ಗ್ಯಾಂಗ್‌ಸ್ಟರ್‌ ದಾವೂದ್ ಇಬ್ರಾಹಿಂನ ಅಲಿಶಾನ್ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ಅವರಿಗೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆಯ ವೈ + ಮತ್ತು ಝಡ್ + ಭದ್ರತೆಯನ್ನು ಒದಗಿಸಲಾಗುತ್ತಿದೆ” ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಫ್ಯಾಕ್ಟ್‌ಚೆಕ್ : ಧ್ರುವ್ ರಾಠಿಯ ಕುರಿತು ವೈರಲ್ ಸಂದೇಶಕ್ಕೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ನಾವು ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಸರ್ಚ್ ಮಾಡಿದಾಗ ವಿಕಿಪೀಡಿಯಲ್ಲಿ ಮಾಹಿತಿ ದೊರೆತಿದ್ದು, “ರಾಠೀ ಅವರು ಭಾರತದ ಹರಿಯಾಣ ರಾಜ್ಯದಲ್ಲಿ ಹಿಂದೂ ಜಾಟ್ ಕುಟುಂಬದಲ್ಲಿ ಜನಿಸಿದವರು. ಜರ್ಮನಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವ ಮೊದಲು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಯಾಣದಲ್ಲಿ ಪಡೆದರು. ಕಾರ್ಲ್ಸ್‌ರುಹೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ರಾಠೀ ಪದವಿ ಪಡೆದಿದ್ದಾರೆ. ನಂತರ ಅದೇ ಸಂಸ್ಥೆಯಿಂದ ನವೀಕರಿಸಬಹುದಾದ ಇಂಧನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ” ಎಂದು ಬರೆಯಲಾಗಿದೆ.

ವಿಕಿಪೀಡಿಯ ಲಿಂಕ್ ಇಲ್ಲಿದೆ 

ಧ್ರುವ್ ರಾಠೀಯ ಯೂಟ್ಯೂಬ್ ಪರಿಶೀಲಿಸಿದಾಗ ಅದರಲ್ಲಿ 16 ಮಾರ್ಚ್ 2023ರಂದು “The Real Story of Dhruv Rathee”ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ. ಈ ವಿಡಿಯೋದಲ್ಲಿ ಸ್ವತಃ ಧ್ರುವ್ ರಾಠೀ ಅವರೇ ತಾನು ಅಕ್ಟೋಬರ್ 1994ರಲ್ಲಿ ಹರಿಯಾಣದ ರೋಹ್ಟಕ್‌ನಲ್ಲಿ ಜನಿಸಿದೆ ಎಂದು ಹೇಳಿಕೊಂಡಿದ್ದಾರೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ಧ್ರುವ್ ರಾಠೀ ಅವರು ಜನಿಸಿದ್ದು ಭಾರತದ ಹರಿಯಾಣದ ರೋಹ್ಟಕ್‌ನಲ್ಲಿ ಎಂದು ತಿಳಿದು ಬಂದಿದೆ. ಹಾಗಾಗಿ, ಅವರು ಪಾಕಿಸ್ತಾನ ಮೂಲದವರು, ದಾವೂದ್ ಗ್ಯಾಂಗ್‌ನವರು ಎಂಬ ಸಂದೇಶವು ಸುಳ್ಳು.

ಇದನ್ನೂ ಓದಿ : Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...