Homeಫ್ಯಾಕ್ಟ್‌ಚೆಕ್Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

- Advertisement -
- Advertisement -

ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಭಾರೀ ಚರ್ಚೆಯಲ್ಲಿರುವ ಯೂಟ್ಯೂಬರ್ ‘ಧ್ರುವ್ ರಾಠೀ’. ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ ಸಾಗುತ್ತಿರುವ ಭಾರತದ ಆಡಳಿತ, ರಾಜಕೀಯ ವ್ಯವಸ್ಥೆಯ ಕುರಿತು ಬೆಳಕು ಚೆಲ್ಲುವ ವಿಡಿಯೋಗಳನ್ನು ಮಾಡುವ ಮೂಲಕ ‘ಧ್ರುವ್‌ ರಾಠೀ’ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ.

ಯೂಟ್ಯೂಬ್‌ನಲ್ಲಿ 16.8 ಮಿಲಿಯನ್ ಸೇರಿ ಮಾರ್ಚ್ 2024ರ ಹೊತ್ತಿಗೆ ಧ್ರುವ್ ರಾಠೀಯ ಎಲ್ಲಾ ಚಾನೆಲ್‌ಗಳ ಚಂದಾದಾರರ ಸಂಖ್ಯೆ ಸುಮಾರು 21.56 ಮಿಲಿಯನ್ ಆಗಿದೆ. ಒಟ್ಟು 4.1 ಬಿಲಿಯನ್ ವಿಡಿಯೋ ವೀಕ್ಷಣೆಗಳನ್ನು ಹೊಂದಿದ್ದಾರೆ.

ಇಂತಹ ಧ್ರುವ್ ರಾಠೀ ಪಾಕಿಸ್ತಾನ ಮೂಲದವರು, ಹಿಂದೂ ವಿರೋಧಿ, ಮೋದಿ ವಿರೋಧಿ ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

“ಧ್ರುವ್ ರಾಠೀ ಅವರ ನಿಜವಾದ ಹೆಸರು ಬದ್ರುದ್ದೀನ್ ಲಾಹೋರಿ. ಅವರು ಹುಟ್ಟಿರುವುದು ಪಾಕಿಸ್ತಾನದಲ್ಲಿ. ಅವರ ಪತ್ನಿ ಜೂಲಿ ಅವರು ಮೂಲತಃ ಮುಸ್ಲಿಂ. ಆಕೆಯ ನಿಜವಾದ ಹೆಸರು ಝುಲೈಕಾ. ಧ್ರುವ್ ಅವರು ಕರಾಚಿಯಲ್ಲಿರುವ ನಟೋರಿಯಸ್ ಗ್ಯಾಂಗ್‌ಸ್ಟರ್‌ ದಾವೂದ್ ಇಬ್ರಾಹಿಂನ ಅಲಿಶಾನ್ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ಅವರಿಗೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆಯ ವೈ + ಮತ್ತು ಝಡ್ + ಭದ್ರತೆಯನ್ನು ಒದಗಿಸಲಾಗುತ್ತಿದೆ” ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಫ್ಯಾಕ್ಟ್‌ಚೆಕ್ : ಧ್ರುವ್ ರಾಠಿಯ ಕುರಿತು ವೈರಲ್ ಸಂದೇಶಕ್ಕೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ನಾವು ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಸರ್ಚ್ ಮಾಡಿದಾಗ ವಿಕಿಪೀಡಿಯಲ್ಲಿ ಮಾಹಿತಿ ದೊರೆತಿದ್ದು, “ರಾಠೀ ಅವರು ಭಾರತದ ಹರಿಯಾಣ ರಾಜ್ಯದಲ್ಲಿ ಹಿಂದೂ ಜಾಟ್ ಕುಟುಂಬದಲ್ಲಿ ಜನಿಸಿದವರು. ಜರ್ಮನಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವ ಮೊದಲು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಯಾಣದಲ್ಲಿ ಪಡೆದರು. ಕಾರ್ಲ್ಸ್‌ರುಹೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ರಾಠೀ ಪದವಿ ಪಡೆದಿದ್ದಾರೆ. ನಂತರ ಅದೇ ಸಂಸ್ಥೆಯಿಂದ ನವೀಕರಿಸಬಹುದಾದ ಇಂಧನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ” ಎಂದು ಬರೆಯಲಾಗಿದೆ.

ವಿಕಿಪೀಡಿಯ ಲಿಂಕ್ ಇಲ್ಲಿದೆ 

ಧ್ರುವ್ ರಾಠೀಯ ಯೂಟ್ಯೂಬ್ ಪರಿಶೀಲಿಸಿದಾಗ ಅದರಲ್ಲಿ 16 ಮಾರ್ಚ್ 2023ರಂದು “The Real Story of Dhruv Rathee”ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ. ಈ ವಿಡಿಯೋದಲ್ಲಿ ಸ್ವತಃ ಧ್ರುವ್ ರಾಠೀ ಅವರೇ ತಾನು ಅಕ್ಟೋಬರ್ 1994ರಲ್ಲಿ ಹರಿಯಾಣದ ರೋಹ್ಟಕ್‌ನಲ್ಲಿ ಜನಿಸಿದೆ ಎಂದು ಹೇಳಿಕೊಂಡಿದ್ದಾರೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ಧ್ರುವ್ ರಾಠೀ ಅವರು ಜನಿಸಿದ್ದು ಭಾರತದ ಹರಿಯಾಣದ ರೋಹ್ಟಕ್‌ನಲ್ಲಿ ಎಂದು ತಿಳಿದು ಬಂದಿದೆ. ಹಾಗಾಗಿ, ಅವರು ಪಾಕಿಸ್ತಾನ ಮೂಲದವರು, ದಾವೂದ್ ಗ್ಯಾಂಗ್‌ನವರು ಎಂಬ ಸಂದೇಶವು ಸುಳ್ಳು.

ಇದನ್ನೂ ಓದಿ : Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...