Homeಫ್ಯಾಕ್ಟ್‌ಚೆಕ್Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

“ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ. ಇದು ಪಿಎಫ್ಐನ ವಿಷನ್-2047 ಡಾಕ್ಯುಮೆಂಟ್ ಇದ್ದಂತೆ. ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಲವ್ ಜಿಹಾದ್‌ ಮತ್ತು ಶಾಲೆಗಳಲ್ಲಿ ಬುರ್ಖಾಗೆ ಬೆಂಬಲ. ಬಹುಸಂಖ್ಯಾತವಾದವನ್ನು (ಹಿಂದೂ ಧರ್ಮ) ಕೊನೆಗೊಳಿಸುತ್ತೇವೆ. ಗೋಮಾಂಸವನ್ನು ಕಾನೂನು ಬದ್ದ ಮಾಡುತ್ತೇವೆ. ಮುಸ್ಲಿಮರಿಗೆ ಪ್ರತ್ಯೇಖ ಸಾಲ ಬಡ್ಡಿ ನೀಡುತ್ತೇವೆ ಎಂದು ಘೋಷಿಸಿಕೊಂಡಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಈ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದು, ಇನ್ನೂ ಅನೇಕ ಎಕ್ಸ್ ಬಳಕೆದಾರರು ಇದೇ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಹಂಚಿಕೊಳ್ಳಲಾದ ಪೋಸ್ಟ್ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ವೈರಲ್ ಪೋಸ್ಟ್‌ನಲ್ಲಿ ಹೇಳಿರುವ ಅಂಶಗಳು ನಿಜಾನ? ಎಂದು ತಿಳಿದುಕೊಳ್ಳಲು, ಇತ್ತೀಚೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ನಾವು ಪರಿಶೀಲಿಸಿದ್ದೇವೆ.

ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯಲ್ಲಿ…

1. ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಇವಿಷ್ಟು ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ. ವೈರಲ್ ಪೋಸ್ಟ್‌ನಲ್ಲಿ ಹೇಳಿದಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಖ್ ಮರಳಿ ತರುತ್ತೇವೆ, ಲವ್ ಜಿಹಾದ್ ಬೆಂಬಲಿಸುತ್ತೇವೆ, ಬಹು ಸಂಖ್ಯಾತವಾದವನ್ನು ಕೊನೆಗೊಳಿಸುತ್ತೇವೆ ಎಂದಿಲ್ಲ. ಆದರಿಂದ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....