Homeಫ್ಯಾಕ್ಟ್‌ಚೆಕ್Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

“ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ. ಇದು ಪಿಎಫ್ಐನ ವಿಷನ್-2047 ಡಾಕ್ಯುಮೆಂಟ್ ಇದ್ದಂತೆ. ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಲವ್ ಜಿಹಾದ್‌ ಮತ್ತು ಶಾಲೆಗಳಲ್ಲಿ ಬುರ್ಖಾಗೆ ಬೆಂಬಲ. ಬಹುಸಂಖ್ಯಾತವಾದವನ್ನು (ಹಿಂದೂ ಧರ್ಮ) ಕೊನೆಗೊಳಿಸುತ್ತೇವೆ. ಗೋಮಾಂಸವನ್ನು ಕಾನೂನು ಬದ್ದ ಮಾಡುತ್ತೇವೆ. ಮುಸ್ಲಿಮರಿಗೆ ಪ್ರತ್ಯೇಖ ಸಾಲ ಬಡ್ಡಿ ನೀಡುತ್ತೇವೆ ಎಂದು ಘೋಷಿಸಿಕೊಂಡಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಈ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದು, ಇನ್ನೂ ಅನೇಕ ಎಕ್ಸ್ ಬಳಕೆದಾರರು ಇದೇ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಹಂಚಿಕೊಳ್ಳಲಾದ ಪೋಸ್ಟ್ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ವೈರಲ್ ಪೋಸ್ಟ್‌ನಲ್ಲಿ ಹೇಳಿರುವ ಅಂಶಗಳು ನಿಜಾನ? ಎಂದು ತಿಳಿದುಕೊಳ್ಳಲು, ಇತ್ತೀಚೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ನಾವು ಪರಿಶೀಲಿಸಿದ್ದೇವೆ.

ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯಲ್ಲಿ…

1. ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಇವಿಷ್ಟು ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ. ವೈರಲ್ ಪೋಸ್ಟ್‌ನಲ್ಲಿ ಹೇಳಿದಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಖ್ ಮರಳಿ ತರುತ್ತೇವೆ, ಲವ್ ಜಿಹಾದ್ ಬೆಂಬಲಿಸುತ್ತೇವೆ, ಬಹು ಸಂಖ್ಯಾತವಾದವನ್ನು ಕೊನೆಗೊಳಿಸುತ್ತೇವೆ ಎಂದಿಲ್ಲ. ಆದರಿಂದ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...