Homeಮುಖಪುಟಕವಿತೆಯ ಮೇಲಿನ ಕೇಸ್‌ ಸರ್ಕಾರ ಕೂಡಲೇ ವಾಪಸ್‌ ಪಡೆಯಬೇಕು: ಅಖಿಲ ಭಾರತೀಯ ವಕೀಲರ ಒಕ್ಕೂಟ ಆಗ್ರಹ..

ಕವಿತೆಯ ಮೇಲಿನ ಕೇಸ್‌ ಸರ್ಕಾರ ಕೂಡಲೇ ವಾಪಸ್‌ ಪಡೆಯಬೇಕು: ಅಖಿಲ ಭಾರತೀಯ ವಕೀಲರ ಒಕ್ಕೂಟ ಆಗ್ರಹ..

- Advertisement -
- Advertisement -

ಕೊಪ್ಪಳದ ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್ ಸಂಪಾದಕರಾದ ರಾಜಬಕ್ಷಿ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಮಿನಲ್ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕೆಂದು ಅಖಿಲ ಭಾರತೀಯ ವಕೀಲರ ಒಕ್ಕೂಟ ಆಗ್ರಹಿಸಿದೆ.

ಇಂದು ಕೊಪ್ಪಳದ ಸಿರಾಜ್‌ ಮತ್ತು ರಾಜಭಕ್ಷಿಯವರ ಮನೆಗೆ ತೆರಳಿ ಸತ್ಯಶೋಧನೆ ನಡೆಸಿದ ವಕೀಲರ ತಂಡವು
ಸುದ್ದಿಗೋಷ್ಠಿಯಲ್ಲಿ ಕವಿತೆಯ ಮೇಲೆ ಕೇಸ್‌ ಹಾಕುವುದು ಸಂವಿಧಾನ ವಿರೋಧಿಯಾದುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಗತಿಪರ ವಕೀಲರಾದ ಆರ್‌ ಜಗನ್ನಾಥ್‌ ಮಾತನಾಡಿ, ಕವಿತೆ, ಕಾದಂಬರಿ ಥರದ ಸೃಜನಶೀಲ ಸಾಹಿತ್ಯವನ್ನು ಅಭಿವ್ಯಕ್ತಪಡಿಸುವುದು ಸಾಂವಿಧಾನಿಕವಾಗಿ ದಕ್ಕಿರುವ ಹಕ್ಕಾಗಿದೆ. ಅದು ಪ್ರತಿಯೊಬ್ಬ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹಾಗಾಗಿ ಕವಿತೆ ಓದಿದ್ದಕ್ಕೆ ಕ್ರಿಮಿನಲ್ ಕೇಸು ಹಾಕಿ ವಿಚಾರಣೆಗೊಳಪಡಿಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕೇಸ್‌ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿಡಿಯೋ ನೋಡಿ

ಅಖಿಲ ಭಾರತ ವಕೀಲ ಒಕ್ಕೂಟದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌ ಮಾತನಾಡಿ, ಸಿರಾಜ್ ಬಿಸರಳ್ಳಿ ಹಾಗೂ ರಾಜಬಕ್ಷಿ ಅವರ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಪೊಲೀಸರು ರಾಜಕೀಯ ಪಕ್ಷದ ಪ್ರತಿನಿಧಿಗಳಂತೆ ವರ್ತಿಸಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂವಿಧಾನ ಹಾಗೂ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಅಂಶಗಳು ಸಂವಿಧಾನ ಮತ್ತು ಸುಪ್ರಿಂ ಕೋರ್ಟ್ ನ ರಕ್ಷಣೆಗೆ ಒಳಪಟ್ಟಿವೆ. ಗಂಗಾವತಿ ಠಾಣೆಯಲ್ಲಿ ಕ್ರೈ.ನಂ 23/2020 ರಲ್ಲಿ ಭಾರತೀಯ ದಂಡ ಸಂಹಿತೆ ಕಲಂ‌ 505(2) ರಡಿ ಪ್ರಕರಣ ದಾಖಲಿಸಿರುವುದು ದುರದೃಷ್ಟಕರ ವಿಚಾರ. ಅಲ್ಲದೇ ಈ ಕೇಸ್‌ ಕೋರ್ಟಿನಲ್ಲಿ ಬಿದ್ದು ಹೋಗುವಂತ ಕೇಸ್ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಆರ್ ಕೆ ದೇಸಾಯಿ, ರಾಜ್ಯ ಸಮಿತಿಯ ಸದಸ್ಯೆ ವಿಜಯ ಲಕ್ಷ್ಮಿ, ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ಅಧ್ಯಕ್ಷರಾದ ಅನೀಶ್ ಪಾಷಾ ಹಾಜರಿದ್ದರು.

ನಂತರ ಪತ್ರಕರ್ತ ಬಿಸರಳ್ಳಿ, ಕನ್ನಡ ನೆಟ್ ನ ಸಂಪಾದಕ ರಾಜಬಕ್ಷಿ ಅವರ ಮನೆಗೆ ಭೇಟಿ ನೀಡಿದ ಅಖಿನ ಭಾರತ ವಕೀಲರ ಒಕ್ಕೂಟದ ಸದಸ್ಯರು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ನಾವು ನಿಮ್ಮ ಜೊತೆಗಿದ್ದೇವೆ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...