Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...