Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...