Homeಕರ್ನಾಟಕಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

- Advertisement -
- Advertisement -

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ ಸಿವಿಲ್ ರೈಟ್ಸ್‌ ಕರ್ನಾಟಕ (ಎಪಿಸಿಆರ್) ಮತ್ತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್‌ ಕರ್ನಾಟಕ (ಎಐಎಲ್‌ಎಜೆ) ಜಂಟಿಯಾಗಿ ಬಿಡುಗಡೆ ಮಾಡಿದೆ.

ವರದಿ ಬಿಡುಗಡೆ ಮಾಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ “ರಾಜ್ಯದ ಆಡಳಿತವು ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ ವಿಫಲವಾಗಿದೆ. ಅಶ್ರಫ್ ಗುಂಪು ಹತ್ಯೆ, ಕತ್ತರಘಟ್ಟದ ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವುದು ಕಾನೂನು ಮತ್ತು ಆಡಳಿತದ ಮೇಲಿನ ಜನರ ನಂಬಿಕೆ ಕುಂದಿಸಿದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ ದಶಕಗಳಿಂದಲೂ ಸೌಹಾರ್ದತೆ ಮತ್ತು ಮಾನವೀಯತೆ ಕುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಮಾವಳ್ಳಿ ಶಂಕರ್, ‘ಅಶ್ರಫ್ ಅವರ ಸಹೋದರ ಜಬ್ಬಾರ್ ಹೇಳಿದಂತೆ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು’ ಎಂದರು.

ವರ್ಣಭೇದ ನೀತಿಗಳ ಸಮಕಾಲೀನ ಸ್ವರೂಪಗಳ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರರಾಗಿರುವ ಅಶ್ವಿನಿ ಕೆ.ಪಿ ಮಾತನಾಡಿ, “ಎಲ್ಲಾ ರೀತಿಯ ಜನಾಂಗೀಯ ತಾರತಮ್ಯಗಳ ನಿರ್ಮೂಲನೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ. ಆದ್ದರಿಂದ ಇಂತಹ ಹಿಂಸಾಚಾರಕ್ಕೆ ಕಾರಣವಾಗುವ ದ್ವೇಷವನ್ನು ತೊಡೆದು ಹಾಕಲು ಭಾರತ ಬದ್ಧವಾಗಿದೆ ಎಂಬುವುದನ್ನು ಒತ್ತಿ ಹೇಳಿದರು.

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ. ಪಹಲ್ಗಾಮ್ ದಾಳಿಯನ್ನು ಕೋಮುವಾದಗೊಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ. ಅಶ್ರಫ್ ಹತ್ಯೆಯಂತಹ ಘಟನೆಗಳಿಗೆ ಮಾಧ್ಯಮಗಳೇ ಕಾರಣ. ಅವುಗಳೂ ಮತ್ತಷ್ಟೂ ಜವಾಬ್ದಾರಿಯುತವಾಗಿ ವರದಿ ಮಾಡಬೇಕು. ಕಾನೂನನ್ನು ಜಾರಿ ಮಾಡಬೇಕಾದ ಸಂಸ್ಥೆಗಳು ತಳಮಟ್ಟದ ಜನರ ಬಗ್ಗೆ ನಿರ್ಲಕ್ಷ್ಯ ಮತ್ತು ಪಕ್ಷಪಾತ ಪ್ರದರ್ಶಿಸುವುದು ಆಘಾತಕಾರಿಯಾಗಿದೆ ಎಂದರು.

ಆಲ್ ಇಂಡಿಯಾ ಅಸೋಸಿಯೇಷನ್ ಫಾರ್ ಜಸ್ಟೀಸ್‌ನ ಅಧ್ಯಕ್ಷೆ ಮೈತ್ರೇಯಿ ಕೃಷ್ಣನ್ ಅವರು ಮಾತನಾಡಿ, “ಅಶ್ರಫ್ ಅವರ ಗುಂಪು ಹತ್ಯೆಯನ್ನು 2018ರ ತಹಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿವರಿಸಿದರು. ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ ಎಂದು ಒತ್ತಿ ಹೇಳಿದರು. ಇಂತಹ ದ್ವೇಷ ಅಪರಾಧಗಳು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ವಿವರಿಸಿದರು. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ, ಸುಪ್ರೀಂ ಕೋರ್ಟ್‌ನ ಗುಂಪು ಹತ್ಯೆಯ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ತನಿಖೆ ಮತ್ತು ದಾಖಲಾತಿಯಲ್ಲಿ ಪೊಲೀಸರು ತೋರಿದ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಜಾಮೀನು ದೊರೆತಿವೆ ಎಂದು ವಕೀಲರಾಗಿರುವ ವಿನಯ್ ಶ್ರೀನಿವಾಸ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ವಿವಿಧ ನಾಗರಿಕ ಸಮಾಜ ಗುಂಪುಗಳೊಂದಿಗೆ ಸಭೆ ನಡೆಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಕರೆ ನೀಡಿದರು.

ದ್ವೇಷ ಮತ್ತು ನಕಲಿ ಸುದ್ದಿಗಳ ವಿರುದ್ಧ ಹೊಸ ಕಾನೂನುಗಳನ್ನು ಪರಿಚಯಿಸುವ ಮತ್ತು ವಿಶೇಷ ಕಾರ್ಯಪಡೆಗಳನ್ನು ನೇಮಿಸುವ ಸರ್ಕಾರದ ಕ್ರಮಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾರಣ, ಸರ್ಕಾರವು ಈಗಾಗಲೇ ಅಸ್ತಿತ್ವದಲ್ಲಿರುವ ಮೂಲಭೂತ ಕಾನೂನುಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಅವರು ವಿವರಿಸಿದರು.

ಪೊಲೀಸರ ಮತ್ತು ಸಾರ್ವಜನಿಕರ ಪ್ರತಿಕ್ರಿಯೆಯನ್ನು ಗಮನಿಸಿದರೆ, ತಮಗೆ ತೀವ್ರ ನಿರಾಶೆಯಾಗಿದೆ ಎಂದು ಎಸ್‌ಐಒ ಕರ್ನಾಟಕದ ಮೊಹಮ್ಮದ್ ಹಯ್ಯಾನ್, ಅಶ್ರಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ, ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುಂಪು ದಾಳಿಗೆ ಬಲಿಯಾದ ಮೊಹಮ್ಮದ್ ಅಶ್ರಫ್ ಅವರ ಸಹೋದರ ಜಬ್ಬಾರ್ ಉಪಸ್ಥಿತರಿದ್ದರು.

ಸತ್ಯ ಶೋಧನೆಯ ಸಂಪೂರ್ಣ ವರದಿ ಓದಲು ಕೆಳಗಿನ ಲಿಂಕ್ ಒತ್ತಿ

ಅಶ್ರಫ್ ಗುಂಪು ಹತ್ಯೆ ಸತ್ಯ ಶೋಧನಾ ವರದಿ 

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...