Homeನಿಜವೋ ಸುಳ್ಳೋFact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

Fact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

- Advertisement -
- Advertisement -

ಪ್ರಧಾನಿ ಮೋದಿಯವರ ಮನವಿಯ ಮೇರೆಗೆ ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲಾಯಿತು. ಆದರೆ ಹಲಾವಾರು ಕಡೆ ಜನರು ಪಟಾಕಿ ಸಿಡಿಸಿ, ಬೀದಿಗಳಿಗೆ ಬಂದು ಪಂಜಿನ ಮೆರವಣಿಗೆ ಮಾಡಿ ಮೂರ್ಖತನ ಮೆರೆದರು. ಈ ಮಧ್ಯೆ ಹಲವಾರು ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣ ಹಾಗೂ ಮುಖ್ಯ ವಾಹಿನಿಯ ಮಾಧ್ಯಮಗಳಲ್ಲೂ ಹರಿದಾಡಿವೆ. ಕೆಲವೊಂದು ನಿಜವಾದರೆ ಕೆಲವೊಂದು ಸುಳ್ಳಗಳನ್ನು ಹರಡಲಾಗಿದೆ.

ಮಹಾರಾಷ್ಟ್ರದ ಸೋಲಾಪುರ ನಗರದ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ಒಣಗಿದ ಹುಲ್ಲು ಬೆಂಕಿಗೆ ಆಹುತಿಯಾಗಿದೆ ಎಂಬ ವರದಿಯೂ ಹೊರಬಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿತು, ಇದನ್ನು ಹಲವಾರು ಜನ ಹಂಚಿಕೊಂಡಿದ್ದರು. ಟಿವಿ 9 ಮರಾಠಿ ಕೂಡಾ ಏಪ್ರಿಲ್ 5 ರಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿ ಅದನ್ನೇ ಪ್ರಸಾರ ಮಾಡಿತು. ಆದರೆ ಆ ಚಾನೆಲ್ ಈಗ ಆ ವೀಡಿಯೊವನ್ನು ಯೂಟ್ಯೂಬ್‌ನಿಂದ ತೆಗೆದಿದೆ.

ನ್ಯೂಸ್ 18 ರ ಮರಾಠಿ ಚಾನೆಲ್ ಲೋಕಮತ್ ವರದಿಗಾರ ಸಾಗರ್ ಸುರವಾಸೆ ಕೂಡಾ ಇದೆ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಸುರವಾಸ್ ಅವರ ಟ್ವೀಟ್‌ಗೆ ರಿಟ್ವೀಟ್ ಮಾಡಿ ಅದು ಹಳೆಯ ವಿಡಿಯೊ ಕ್ಲಿಪ್ ಎಂದು ಸ್ಪಷ್ಟಪಡಿಸಿದ್ದರು.

ಅಷ್ಟೆ ಅಲ್ಲದೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ಕಾಂಗ್ರೆಸ್ ನಾಯಕರಾದ ಶ್ರೀವಾತ್ಸ ಕೂಡಾ ಸೋಲಾಪುರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು.

ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿದ ನಂತರದಲ್ಲಿ ಸೋಲಾಪುರ ವಿಮಾನ ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು “ದಿ ಹಿಂದೂ” ಕೂಡಾ ವರದಿ ಮಾಡಿತ್ತು (ವರದಿಗೆ ಇಲ್ಲಿ ಕ್ಲಿಕ್ ಮಾಡಿ), ಅವರ ಪ್ರಕಾರ “ಸೋಲಾಪುರ ವಿಮಾನ ನಿಲ್ದಾಣದ ವಾಯುಪ್ರದೇಶದ ಉದ್ದಕ್ಕೂ ಇರುವ ಒಣ ಹುಲ್ಲುಗಳಿಗೆ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಪಟಾಕಿ ಸಿಡಿಸುವುದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ನಂಬಲಾಗಿದೆ.”

ಫ್ಯಾಕ್ಟ್ ಚೆಕ್:

ಪ್ರಮುಖ ವ್ಯಕ್ತಿಗಳು ಟ್ವೀಟ್ ಮಾಡಿದ ಈ ವೀಡಿಯೊ ಹಳೆಯದು ಮತ್ತು ಅದಕ್ಕೂ ಇತ್ತೀಚೆಗಿನ ಘಟನೆಗೂ ಸಂಭಂಧವಿಲ್ಲ. ಯೂಟ್ಯೂಬ್‌ನಲ್ಲಿ ಕೀವರ್ಡ್ ಮೂಲಕ ನಡೆಸಿದಾಗ ಅದು ಫೆಬ್ರವರಿ 3, 2020 ರಂದು ಎಬಿಪಿ ಮಜಾ ಟಿವಿಯು ಪ್ರಸಾರ ಮಾಡಿದ್ದ ವಿಡಿಯೊ ಎಂದು “ಆಲ್ಟ್ ನ್ಯೂಸ್” ಕಂಡುಹಿಡಿದಿದೆ.

ಕೆಳಗಿರುವ ವಿಡಿಯೊ ಗಮನಿಸಿ.

ಫೆಬ್ರವರಿ 3, 2020 ರಂದು ಎಬಿಪಿ ಮಜಾ ಪ್ರಸಾರ ಮಾಡಿದ್ದ ವಿಡಿಯೊ ಮತ್ತು ಏಪ್ರಿಲ್ 5 ರಂದು ಟಿವಿ 9 ಮರಾಠಿ ಪ್ರಸಾರ ಮಾಡಿರುವ ವಿಡಿಯೊ ಎರಡೂ ಒಂದೇ ಎಂದು ತಿಳಿದು ಬಮದಿದೆ. ಕಳಗಿರುವ ಸ್ಕ್ರೀನ್ ಶಾರ್ಟ್‌ಗಳು ಅದನ್ನು ನಿರೂಪಿಸುತ್ತದೆ.

ಒಟ್ಟಿನಲ್ಲಿ ಪ್ರಧಾನಮಂತ್ರಿಯವರು ಕರೆ ನೀಡಿದ್ದ ದೀಪ ಬೆಳಗಿಸುವ ಅಭಿಯಾನದಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿಲ್ಲ ಹಾಗೂ ಅದು ಸರಿಸುಮಾರು ಎರಡು ತಿಂಗಳ ಹಿಂದೆ ನಡೆದ ಘಟನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...