Homeನಿಜವೋ ಸುಳ್ಳೋFact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

Fact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

- Advertisement -
- Advertisement -

ಪ್ರಧಾನಿ ಮೋದಿಯವರ ಮನವಿಯ ಮೇರೆಗೆ ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲಾಯಿತು. ಆದರೆ ಹಲಾವಾರು ಕಡೆ ಜನರು ಪಟಾಕಿ ಸಿಡಿಸಿ, ಬೀದಿಗಳಿಗೆ ಬಂದು ಪಂಜಿನ ಮೆರವಣಿಗೆ ಮಾಡಿ ಮೂರ್ಖತನ ಮೆರೆದರು. ಈ ಮಧ್ಯೆ ಹಲವಾರು ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣ ಹಾಗೂ ಮುಖ್ಯ ವಾಹಿನಿಯ ಮಾಧ್ಯಮಗಳಲ್ಲೂ ಹರಿದಾಡಿವೆ. ಕೆಲವೊಂದು ನಿಜವಾದರೆ ಕೆಲವೊಂದು ಸುಳ್ಳಗಳನ್ನು ಹರಡಲಾಗಿದೆ.

ಮಹಾರಾಷ್ಟ್ರದ ಸೋಲಾಪುರ ನಗರದ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ಒಣಗಿದ ಹುಲ್ಲು ಬೆಂಕಿಗೆ ಆಹುತಿಯಾಗಿದೆ ಎಂಬ ವರದಿಯೂ ಹೊರಬಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿತು, ಇದನ್ನು ಹಲವಾರು ಜನ ಹಂಚಿಕೊಂಡಿದ್ದರು. ಟಿವಿ 9 ಮರಾಠಿ ಕೂಡಾ ಏಪ್ರಿಲ್ 5 ರಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿ ಅದನ್ನೇ ಪ್ರಸಾರ ಮಾಡಿತು. ಆದರೆ ಆ ಚಾನೆಲ್ ಈಗ ಆ ವೀಡಿಯೊವನ್ನು ಯೂಟ್ಯೂಬ್‌ನಿಂದ ತೆಗೆದಿದೆ.

ನ್ಯೂಸ್ 18 ರ ಮರಾಠಿ ಚಾನೆಲ್ ಲೋಕಮತ್ ವರದಿಗಾರ ಸಾಗರ್ ಸುರವಾಸೆ ಕೂಡಾ ಇದೆ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಸುರವಾಸ್ ಅವರ ಟ್ವೀಟ್‌ಗೆ ರಿಟ್ವೀಟ್ ಮಾಡಿ ಅದು ಹಳೆಯ ವಿಡಿಯೊ ಕ್ಲಿಪ್ ಎಂದು ಸ್ಪಷ್ಟಪಡಿಸಿದ್ದರು.

ಅಷ್ಟೆ ಅಲ್ಲದೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ಕಾಂಗ್ರೆಸ್ ನಾಯಕರಾದ ಶ್ರೀವಾತ್ಸ ಕೂಡಾ ಸೋಲಾಪುರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು.

ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿದ ನಂತರದಲ್ಲಿ ಸೋಲಾಪುರ ವಿಮಾನ ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು “ದಿ ಹಿಂದೂ” ಕೂಡಾ ವರದಿ ಮಾಡಿತ್ತು (ವರದಿಗೆ ಇಲ್ಲಿ ಕ್ಲಿಕ್ ಮಾಡಿ), ಅವರ ಪ್ರಕಾರ “ಸೋಲಾಪುರ ವಿಮಾನ ನಿಲ್ದಾಣದ ವಾಯುಪ್ರದೇಶದ ಉದ್ದಕ್ಕೂ ಇರುವ ಒಣ ಹುಲ್ಲುಗಳಿಗೆ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಪಟಾಕಿ ಸಿಡಿಸುವುದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ನಂಬಲಾಗಿದೆ.”

ಫ್ಯಾಕ್ಟ್ ಚೆಕ್:

ಪ್ರಮುಖ ವ್ಯಕ್ತಿಗಳು ಟ್ವೀಟ್ ಮಾಡಿದ ಈ ವೀಡಿಯೊ ಹಳೆಯದು ಮತ್ತು ಅದಕ್ಕೂ ಇತ್ತೀಚೆಗಿನ ಘಟನೆಗೂ ಸಂಭಂಧವಿಲ್ಲ. ಯೂಟ್ಯೂಬ್‌ನಲ್ಲಿ ಕೀವರ್ಡ್ ಮೂಲಕ ನಡೆಸಿದಾಗ ಅದು ಫೆಬ್ರವರಿ 3, 2020 ರಂದು ಎಬಿಪಿ ಮಜಾ ಟಿವಿಯು ಪ್ರಸಾರ ಮಾಡಿದ್ದ ವಿಡಿಯೊ ಎಂದು “ಆಲ್ಟ್ ನ್ಯೂಸ್” ಕಂಡುಹಿಡಿದಿದೆ.

ಕೆಳಗಿರುವ ವಿಡಿಯೊ ಗಮನಿಸಿ.

ಫೆಬ್ರವರಿ 3, 2020 ರಂದು ಎಬಿಪಿ ಮಜಾ ಪ್ರಸಾರ ಮಾಡಿದ್ದ ವಿಡಿಯೊ ಮತ್ತು ಏಪ್ರಿಲ್ 5 ರಂದು ಟಿವಿ 9 ಮರಾಠಿ ಪ್ರಸಾರ ಮಾಡಿರುವ ವಿಡಿಯೊ ಎರಡೂ ಒಂದೇ ಎಂದು ತಿಳಿದು ಬಮದಿದೆ. ಕಳಗಿರುವ ಸ್ಕ್ರೀನ್ ಶಾರ್ಟ್‌ಗಳು ಅದನ್ನು ನಿರೂಪಿಸುತ್ತದೆ.

ಒಟ್ಟಿನಲ್ಲಿ ಪ್ರಧಾನಮಂತ್ರಿಯವರು ಕರೆ ನೀಡಿದ್ದ ದೀಪ ಬೆಳಗಿಸುವ ಅಭಿಯಾನದಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿಲ್ಲ ಹಾಗೂ ಅದು ಸರಿಸುಮಾರು ಎರಡು ತಿಂಗಳ ಹಿಂದೆ ನಡೆದ ಘಟನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...