Homeನಿಜವೋ ಸುಳ್ಳೋFact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

Fact check: ದೀಪ ಬೆಳಗುವ ಅಭಿಯಾನದಂದು ಸೋಲಾಪುರದ ವಿಮಾನ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿತ್ತೇ??

- Advertisement -
- Advertisement -

ಪ್ರಧಾನಿ ಮೋದಿಯವರ ಮನವಿಯ ಮೇರೆಗೆ ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲಾಯಿತು. ಆದರೆ ಹಲಾವಾರು ಕಡೆ ಜನರು ಪಟಾಕಿ ಸಿಡಿಸಿ, ಬೀದಿಗಳಿಗೆ ಬಂದು ಪಂಜಿನ ಮೆರವಣಿಗೆ ಮಾಡಿ ಮೂರ್ಖತನ ಮೆರೆದರು. ಈ ಮಧ್ಯೆ ಹಲವಾರು ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣ ಹಾಗೂ ಮುಖ್ಯ ವಾಹಿನಿಯ ಮಾಧ್ಯಮಗಳಲ್ಲೂ ಹರಿದಾಡಿವೆ. ಕೆಲವೊಂದು ನಿಜವಾದರೆ ಕೆಲವೊಂದು ಸುಳ್ಳಗಳನ್ನು ಹರಡಲಾಗಿದೆ.

ಮಹಾರಾಷ್ಟ್ರದ ಸೋಲಾಪುರ ನಗರದ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ಒಣಗಿದ ಹುಲ್ಲು ಬೆಂಕಿಗೆ ಆಹುತಿಯಾಗಿದೆ ಎಂಬ ವರದಿಯೂ ಹೊರಬಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿತು, ಇದನ್ನು ಹಲವಾರು ಜನ ಹಂಚಿಕೊಂಡಿದ್ದರು. ಟಿವಿ 9 ಮರಾಠಿ ಕೂಡಾ ಏಪ್ರಿಲ್ 5 ರಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿ ಅದನ್ನೇ ಪ್ರಸಾರ ಮಾಡಿತು. ಆದರೆ ಆ ಚಾನೆಲ್ ಈಗ ಆ ವೀಡಿಯೊವನ್ನು ಯೂಟ್ಯೂಬ್‌ನಿಂದ ತೆಗೆದಿದೆ.

ನ್ಯೂಸ್ 18 ರ ಮರಾಠಿ ಚಾನೆಲ್ ಲೋಕಮತ್ ವರದಿಗಾರ ಸಾಗರ್ ಸುರವಾಸೆ ಕೂಡಾ ಇದೆ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಸುರವಾಸ್ ಅವರ ಟ್ವೀಟ್‌ಗೆ ರಿಟ್ವೀಟ್ ಮಾಡಿ ಅದು ಹಳೆಯ ವಿಡಿಯೊ ಕ್ಲಿಪ್ ಎಂದು ಸ್ಪಷ್ಟಪಡಿಸಿದ್ದರು.

ಅಷ್ಟೆ ಅಲ್ಲದೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ಕಾಂಗ್ರೆಸ್ ನಾಯಕರಾದ ಶ್ರೀವಾತ್ಸ ಕೂಡಾ ಸೋಲಾಪುರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದರು.

ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿದ ನಂತರದಲ್ಲಿ ಸೋಲಾಪುರ ವಿಮಾನ ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು “ದಿ ಹಿಂದೂ” ಕೂಡಾ ವರದಿ ಮಾಡಿತ್ತು (ವರದಿಗೆ ಇಲ್ಲಿ ಕ್ಲಿಕ್ ಮಾಡಿ), ಅವರ ಪ್ರಕಾರ “ಸೋಲಾಪುರ ವಿಮಾನ ನಿಲ್ದಾಣದ ವಾಯುಪ್ರದೇಶದ ಉದ್ದಕ್ಕೂ ಇರುವ ಒಣ ಹುಲ್ಲುಗಳಿಗೆ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಪಟಾಕಿ ಸಿಡಿಸುವುದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ನಂಬಲಾಗಿದೆ.”

ಫ್ಯಾಕ್ಟ್ ಚೆಕ್:

ಪ್ರಮುಖ ವ್ಯಕ್ತಿಗಳು ಟ್ವೀಟ್ ಮಾಡಿದ ಈ ವೀಡಿಯೊ ಹಳೆಯದು ಮತ್ತು ಅದಕ್ಕೂ ಇತ್ತೀಚೆಗಿನ ಘಟನೆಗೂ ಸಂಭಂಧವಿಲ್ಲ. ಯೂಟ್ಯೂಬ್‌ನಲ್ಲಿ ಕೀವರ್ಡ್ ಮೂಲಕ ನಡೆಸಿದಾಗ ಅದು ಫೆಬ್ರವರಿ 3, 2020 ರಂದು ಎಬಿಪಿ ಮಜಾ ಟಿವಿಯು ಪ್ರಸಾರ ಮಾಡಿದ್ದ ವಿಡಿಯೊ ಎಂದು “ಆಲ್ಟ್ ನ್ಯೂಸ್” ಕಂಡುಹಿಡಿದಿದೆ.

ಕೆಳಗಿರುವ ವಿಡಿಯೊ ಗಮನಿಸಿ.

ಫೆಬ್ರವರಿ 3, 2020 ರಂದು ಎಬಿಪಿ ಮಜಾ ಪ್ರಸಾರ ಮಾಡಿದ್ದ ವಿಡಿಯೊ ಮತ್ತು ಏಪ್ರಿಲ್ 5 ರಂದು ಟಿವಿ 9 ಮರಾಠಿ ಪ್ರಸಾರ ಮಾಡಿರುವ ವಿಡಿಯೊ ಎರಡೂ ಒಂದೇ ಎಂದು ತಿಳಿದು ಬಮದಿದೆ. ಕಳಗಿರುವ ಸ್ಕ್ರೀನ್ ಶಾರ್ಟ್‌ಗಳು ಅದನ್ನು ನಿರೂಪಿಸುತ್ತದೆ.

ಒಟ್ಟಿನಲ್ಲಿ ಪ್ರಧಾನಮಂತ್ರಿಯವರು ಕರೆ ನೀಡಿದ್ದ ದೀಪ ಬೆಳಗಿಸುವ ಅಭಿಯಾನದಂದು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿಲ್ಲ ಹಾಗೂ ಅದು ಸರಿಸುಮಾರು ಎರಡು ತಿಂಗಳ ಹಿಂದೆ ನಡೆದ ಘಟನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...