Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಅಂಫಾನ್‌ ಚಂಡಮಾರುತದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವು ಅತಿ ಹೆಚ್ಚಿನ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಹಾನಿ ವೀಕ್ಷಿಸಲು ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರು ಅವರನ್ನು ಸ್ವಾಗತಿಸಿದ್ದರು. ಆದರೆ ಮೋದಿಯವರು ವಾಪಸ್‌ ತೆರಳುವ ವೇಳೆ ಹೆಲಿಕಾಪ್ಟರ್‌ ಹತ್ತುವಾಗ ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಗಳು ಮೊಳಗಿವೆ ಎಂಬ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಎಕ್ಸ್‌ಪೋಸ್ಟ್‌ ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಈ ವಿಡಿಯೋವನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದು, ಮೂರು ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ.

#ChowkidharChorHai : ke naare , Bengal daure ke dauraan.Join Group => Xpost

Posted by Xpost on Friday, May 22, 2020

 

ಹಲವಾರು ಟ್ವಿಟ್ಟರ್‌ಗಳಲ್ಲಿಯೂ ಈ ವಿಡಿಯೋವನ್ನು ವೈರಲ್‌ ಮಾಡಲಾಗಿದೆ.

ಅಲ್ಲದೇ ಹಾಸನ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಫೇಸ್‌ಬುಕ್‌ ಅಕೌಂಟ್‌ನಿಂದ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಅಲ್ಲಿ “ಏನು ಗುರು ಇದು ಈ ತರ? ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ಮೋದಿ. ಸ್ವಲ್ಪ ನಿದಾನವಾಗಿ ಕೇಳಿ… ಚೌಕಿದಾರ್ ಚೋರ್ ಹೈ ಅಂತ ಕೂಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು” ಎಂಬ ಶೀರ್ಷಿಕೆ ನಿಡಲಾಗಿದೆ.

ಏನು ಗುರು ಇದು ಈ ತರ

ಪಶ್ಚಿಮ ಬಂಗಾಳ ಕ್ಕೆ ಭೇಟಿ ಕೊಟ್ಟ ಮೋದಿ . ಸ್ವಲ್ಪ ನಿದಾನವಾಗಿ ಕೇಳಿ…ಚೌಕಿದರ್ ಚೋರ್ ಹೈ ಅಂತ ಕೊಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು

Posted by ಹಾಸನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ on Saturday, May 23, 2020

ಫ್ಯಾಕ್ಟ್‌ ಚೆಕ್‌

ಮೇಲ್ನೋಟದಲ್ಲಿಯೇ ಇದು ವಾಯ್ಸ್‌ ಎಡಿಟೆಡ್‌ ವಿಡಿಯೋ ಎಂದು ಕಂಡುಬರುತ್ತದೆ. ಇದಕ್ಕೆ ಪುರಾವೆಯಂತೆ ಮೂಲ ವೀಡಿಯೊವನ್ನು ಆಕಾಶವಾಣಿ ಸಾಂಗ್‌ಬಾದ್ ಕೋಲ್ಕತ್ತಾದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಮೇ 22 ರಂದು ಪೋಸ್ಟ್ ಮಾಡಿದೆ. ಇದು ಕೋಲ್ಕತ್ತಾದ ಆಲ್ ಇಂಡಿಯಾ ರೇಡಿಯೊದ ಪ್ರಾದೇಶಿಕ ಸುದ್ದಿ ಘಟಕವಾಗಿದೆ. ಆ ವಿಡಿಯೋದಲ್ಲಿ ಜನರು ‘ದೀದಿ’ ಮತ್ತು ‘ಜೈಶ್ರೀರಾಂ’ ಎನ್ನುವ ಘೋಷಣೆಗಳನ್ನು ಕೆಲವರು ಕೂಗಿದ್ದಾರೆ.

ಆದರೆ ಅದೇ ವಿಡಿಯೋವನ್ನು ಬಳಸಿಕೊಂಡು ಅಲ್ಲಿ ಆಡಿಯೋವನ್ನು ತೆಗೆದು ಹಾಕಲಾಗಿದೆ. ಜೊಗೆತೆ 2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯವರು ಬಂಗಾಳಕ್ಕೆ ಭೇಟಿ ನೀಡಿದಾಗ ಕಾಂಗ್ರೆಸ್‌ ಕಾರ್ಯಕರ್ತರು ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಯ ಆಡಿಯೋವನ್ನು ಪ್ರಸ್ತುತ ಮೋದಿ ಭೇಟಿಯ ವಿಡಿಯೋಗೆ ಸೇರಿಸಿ ಎಡಿಟ್‌ ಮಾಡಲಾಗಿದೆ.

(2019ರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಕೂಗಿದ ವಿಡಿಯೋ)

ಅಲ್ಲಿಗೆ ಈ ಬಾರಿ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಘೋಷಣೆ ಕೂಗಲಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ವೈರಲ್‌ ವಿಡಿಯೋವು ಎಡಿಟ್‌ ಮಾಡಿದ ವಿಡಿಯೋ ಆಗಿದೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...