Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಅಂಫಾನ್‌ ಚಂಡಮಾರುತದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವು ಅತಿ ಹೆಚ್ಚಿನ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಹಾನಿ ವೀಕ್ಷಿಸಲು ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರು ಅವರನ್ನು ಸ್ವಾಗತಿಸಿದ್ದರು. ಆದರೆ ಮೋದಿಯವರು ವಾಪಸ್‌ ತೆರಳುವ ವೇಳೆ ಹೆಲಿಕಾಪ್ಟರ್‌ ಹತ್ತುವಾಗ ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಗಳು ಮೊಳಗಿವೆ ಎಂಬ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಎಕ್ಸ್‌ಪೋಸ್ಟ್‌ ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಈ ವಿಡಿಯೋವನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದು, ಮೂರು ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ.

#ChowkidharChorHai : ke naare , Bengal daure ke dauraan.Join Group => Xpost

Posted by Xpost on Friday, May 22, 2020

 

ಹಲವಾರು ಟ್ವಿಟ್ಟರ್‌ಗಳಲ್ಲಿಯೂ ಈ ವಿಡಿಯೋವನ್ನು ವೈರಲ್‌ ಮಾಡಲಾಗಿದೆ.

ಅಲ್ಲದೇ ಹಾಸನ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಫೇಸ್‌ಬುಕ್‌ ಅಕೌಂಟ್‌ನಿಂದ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಅಲ್ಲಿ “ಏನು ಗುರು ಇದು ಈ ತರ? ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ಮೋದಿ. ಸ್ವಲ್ಪ ನಿದಾನವಾಗಿ ಕೇಳಿ… ಚೌಕಿದಾರ್ ಚೋರ್ ಹೈ ಅಂತ ಕೂಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು” ಎಂಬ ಶೀರ್ಷಿಕೆ ನಿಡಲಾಗಿದೆ.

ಏನು ಗುರು ಇದು ಈ ತರ

ಪಶ್ಚಿಮ ಬಂಗಾಳ ಕ್ಕೆ ಭೇಟಿ ಕೊಟ್ಟ ಮೋದಿ . ಸ್ವಲ್ಪ ನಿದಾನವಾಗಿ ಕೇಳಿ…ಚೌಕಿದರ್ ಚೋರ್ ಹೈ ಅಂತ ಕೊಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು

Posted by ಹಾಸನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ on Saturday, May 23, 2020

ಫ್ಯಾಕ್ಟ್‌ ಚೆಕ್‌

ಮೇಲ್ನೋಟದಲ್ಲಿಯೇ ಇದು ವಾಯ್ಸ್‌ ಎಡಿಟೆಡ್‌ ವಿಡಿಯೋ ಎಂದು ಕಂಡುಬರುತ್ತದೆ. ಇದಕ್ಕೆ ಪುರಾವೆಯಂತೆ ಮೂಲ ವೀಡಿಯೊವನ್ನು ಆಕಾಶವಾಣಿ ಸಾಂಗ್‌ಬಾದ್ ಕೋಲ್ಕತ್ತಾದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಮೇ 22 ರಂದು ಪೋಸ್ಟ್ ಮಾಡಿದೆ. ಇದು ಕೋಲ್ಕತ್ತಾದ ಆಲ್ ಇಂಡಿಯಾ ರೇಡಿಯೊದ ಪ್ರಾದೇಶಿಕ ಸುದ್ದಿ ಘಟಕವಾಗಿದೆ. ಆ ವಿಡಿಯೋದಲ್ಲಿ ಜನರು ‘ದೀದಿ’ ಮತ್ತು ‘ಜೈಶ್ರೀರಾಂ’ ಎನ್ನುವ ಘೋಷಣೆಗಳನ್ನು ಕೆಲವರು ಕೂಗಿದ್ದಾರೆ.

ಆದರೆ ಅದೇ ವಿಡಿಯೋವನ್ನು ಬಳಸಿಕೊಂಡು ಅಲ್ಲಿ ಆಡಿಯೋವನ್ನು ತೆಗೆದು ಹಾಕಲಾಗಿದೆ. ಜೊಗೆತೆ 2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯವರು ಬಂಗಾಳಕ್ಕೆ ಭೇಟಿ ನೀಡಿದಾಗ ಕಾಂಗ್ರೆಸ್‌ ಕಾರ್ಯಕರ್ತರು ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಯ ಆಡಿಯೋವನ್ನು ಪ್ರಸ್ತುತ ಮೋದಿ ಭೇಟಿಯ ವಿಡಿಯೋಗೆ ಸೇರಿಸಿ ಎಡಿಟ್‌ ಮಾಡಲಾಗಿದೆ.

(2019ರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಕೂಗಿದ ವಿಡಿಯೋ)

ಅಲ್ಲಿಗೆ ಈ ಬಾರಿ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಘೋಷಣೆ ಕೂಗಲಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ವೈರಲ್‌ ವಿಡಿಯೋವು ಎಡಿಟ್‌ ಮಾಡಿದ ವಿಡಿಯೋ ಆಗಿದೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...