Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಅಂಫಾನ್‌ ಚಂಡಮಾರುತದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವು ಅತಿ ಹೆಚ್ಚಿನ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಹಾನಿ ವೀಕ್ಷಿಸಲು ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲರು ಅವರನ್ನು ಸ್ವಾಗತಿಸಿದ್ದರು. ಆದರೆ ಮೋದಿಯವರು ವಾಪಸ್‌ ತೆರಳುವ ವೇಳೆ ಹೆಲಿಕಾಪ್ಟರ್‌ ಹತ್ತುವಾಗ ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಗಳು ಮೊಳಗಿವೆ ಎಂಬ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಎಕ್ಸ್‌ಪೋಸ್ಟ್‌ ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಈ ವಿಡಿಯೋವನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದು, ಮೂರು ಸಾವಿರಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ.

#ChowkidharChorHai : ke naare , Bengal daure ke dauraan.Join Group => Xpost

Posted by Xpost on Friday, May 22, 2020

 

ಹಲವಾರು ಟ್ವಿಟ್ಟರ್‌ಗಳಲ್ಲಿಯೂ ಈ ವಿಡಿಯೋವನ್ನು ವೈರಲ್‌ ಮಾಡಲಾಗಿದೆ.

ಅಲ್ಲದೇ ಹಾಸನ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಫೇಸ್‌ಬುಕ್‌ ಅಕೌಂಟ್‌ನಿಂದ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಅಲ್ಲಿ “ಏನು ಗುರು ಇದು ಈ ತರ? ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ಮೋದಿ. ಸ್ವಲ್ಪ ನಿದಾನವಾಗಿ ಕೇಳಿ… ಚೌಕಿದಾರ್ ಚೋರ್ ಹೈ ಅಂತ ಕೂಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು” ಎಂಬ ಶೀರ್ಷಿಕೆ ನಿಡಲಾಗಿದೆ.

ಏನು ಗುರು ಇದು ಈ ತರ

ಪಶ್ಚಿಮ ಬಂಗಾಳ ಕ್ಕೆ ಭೇಟಿ ಕೊಟ್ಟ ಮೋದಿ . ಸ್ವಲ್ಪ ನಿದಾನವಾಗಿ ಕೇಳಿ…ಚೌಕಿದರ್ ಚೋರ್ ಹೈ ಅಂತ ಕೊಗ್ತಾ ಇದಾರೆ ಅಲ್ಲವಾ…. ನಿಜ ಹೇಳಿದ ಜನಗಳು

Posted by ಹಾಸನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ on Saturday, May 23, 2020

ಫ್ಯಾಕ್ಟ್‌ ಚೆಕ್‌

ಮೇಲ್ನೋಟದಲ್ಲಿಯೇ ಇದು ವಾಯ್ಸ್‌ ಎಡಿಟೆಡ್‌ ವಿಡಿಯೋ ಎಂದು ಕಂಡುಬರುತ್ತದೆ. ಇದಕ್ಕೆ ಪುರಾವೆಯಂತೆ ಮೂಲ ವೀಡಿಯೊವನ್ನು ಆಕಾಶವಾಣಿ ಸಾಂಗ್‌ಬಾದ್ ಕೋಲ್ಕತ್ತಾದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಮೇ 22 ರಂದು ಪೋಸ್ಟ್ ಮಾಡಿದೆ. ಇದು ಕೋಲ್ಕತ್ತಾದ ಆಲ್ ಇಂಡಿಯಾ ರೇಡಿಯೊದ ಪ್ರಾದೇಶಿಕ ಸುದ್ದಿ ಘಟಕವಾಗಿದೆ. ಆ ವಿಡಿಯೋದಲ್ಲಿ ಜನರು ‘ದೀದಿ’ ಮತ್ತು ‘ಜೈಶ್ರೀರಾಂ’ ಎನ್ನುವ ಘೋಷಣೆಗಳನ್ನು ಕೆಲವರು ಕೂಗಿದ್ದಾರೆ.

ಆದರೆ ಅದೇ ವಿಡಿಯೋವನ್ನು ಬಳಸಿಕೊಂಡು ಅಲ್ಲಿ ಆಡಿಯೋವನ್ನು ತೆಗೆದು ಹಾಕಲಾಗಿದೆ. ಜೊಗೆತೆ 2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮೋದಿಯವರು ಬಂಗಾಳಕ್ಕೆ ಭೇಟಿ ನೀಡಿದಾಗ ಕಾಂಗ್ರೆಸ್‌ ಕಾರ್ಯಕರ್ತರು ಚೌಕಿದಾರ್‌ ಚೋರ್‌ ಹೈ ಎಂಬ ಘೋಷಣೆಯ ಆಡಿಯೋವನ್ನು ಪ್ರಸ್ತುತ ಮೋದಿ ಭೇಟಿಯ ವಿಡಿಯೋಗೆ ಸೇರಿಸಿ ಎಡಿಟ್‌ ಮಾಡಲಾಗಿದೆ.

(2019ರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಕೂಗಿದ ವಿಡಿಯೋ)

ಅಲ್ಲಿಗೆ ಈ ಬಾರಿ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದಾಗ ಚೌಕಿದಾರ್‌ ಚೋರ್‌ ಹೈ ಎಂದು ಘೋಷಣೆ ಕೂಗಲಾಗಿದೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ವೈರಲ್‌ ವಿಡಿಯೋವು ಎಡಿಟ್‌ ಮಾಡಿದ ವಿಡಿಯೋ ಆಗಿದೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...