Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...