Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...