Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...