Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಫ್ಯಾಕ್ಟ್‌ಚೆಕ್: ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದೇ?

ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, “ನಮ್ಮ ದೇಶದಲ್ಲಿ ಕಾನೂನು ಬಡ ಜನರಿಗೆ ಮಾತ್ರ, ಈ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ” ಎಂದು ಬರೆದುಕೊಂಡಿದ್ದಾರೆ.

ತನ್ನ ರಿಕ್ಷಾವನ್ನು ಸರ್ಕಾರಿ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿರುವಾಗ ಭಾರತದ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವಿಡಿಯೋ.

ರಿಕ್ಷಾ ಚಾಲಕ ಅಳುತ್ತಿರುವ ವೀಡಿಯೋ

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಬಳಕೆದಾರರು ಈ ಮೇಲಿನ ಹೇಳಿಕೆಯನ್ನೇ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಫ್ಯಾಕ್ಟ್‌ಚೆಕ್:

ಈ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೀಡಿಯೊದಲ್ಲಿ ಕಂಡುಬರುವ ಕೆಲವು ಪಠ್ಯವು ಬಂಗಾಳಿ ಭಾಷೆಯಲ್ಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ವೀಡಿಯೊದ 0.25 ನಿಮಿಷದ  ಅವಧಿಯಲ್ಲಿ ವ್ಯಕ್ತಿಯು ಅಳುತ್ತಿರುವಾಗ ‘ಜಮುನಾ ಟಿವಿ’ಯ ಲೋಗೋ ಇರುವ ಮೈಕ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ‘ಜಮುನಾ ಟಿವಿ’ ಬಾಂಗ್ಲಾದೇಶ ಮೂಲದ ಸುದ್ದಿ ವಾಹಿನಿಯಾಗಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊ ಕುರಿತ ಮಾಹಿತಿಗಾಗಿ ಹುಡುಕಿದಾಗ, 06 ಅಕ್ಟೋಬರ್ 2020 ರಂದು ಜಮುನಾ ಟಿವಿ ಅಧಿಕೃತ ಯೂಟ್ಯೂಬ್ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿಯೂ ಇದೇ ದೃಶ್ಯಗಳು ಕಂಡುಬಂದಿದೆ. ವೀಡಿಯೊದಲ್ಲಿ, ಇದನ್ನು ರಿಕ್ಷಾ-ಎಳೆಯುವವರ ಕಿರುಚಾಟ ಎಂದು ವಿವರಿಸಲಾಗಿದೆ. ಯೂಟ್ಯೂಬ್‌ನಲ್ಲಿ ಬಾಂಗ್ಲಾದೇಶದ ನ್ಯೂಸ್ ಪೋರ್ಟಲ್ ‘bdnews24.com’ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಈ ವೀಡಿಯೊದ ವಿವರಣೆಯಲ್ಲಿ, ರಿಕ್ಷಾ ಚಾಲಕ ಫಜ್ಲೂರ್ ರಹಮಾನ್ ‘05 ಅಕ್ಟೋಬರ್ 2020 ರಂದು ಡಿಎಸ್‌ಸಿಸಿಯ ರಿಕ್ಷಾ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ವಾಹನವನ್ನು ವಶಪಡಿಸಿಕೊಂಡ ನಂತರ ಡಾಕಾದ ಜಿಗತಲಾ ಪ್ರದೇಶದಲ್ಲಿ ಅಳುತ್ತಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆಯ ಬಗ್ಗೆ ‘bdnews24.com’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಫಜ್ಲೂರ್ ರೆಹಮಾನ್ ತನ್ನ ಕೆಲಸವನ್ನು ಕಳೆದುಕೊಂಡಿದ್ದು, ಆತ ಬಾಂಗ್ಲಾದೇಶದಲ್ಲಿ ತನ್ನ ಜೀವನೋಪಾಯಕ್ಕಾಗಿ 80,000 ರೂಗಳ ಟಕಾ ಸಾಲವನ್ನು ತೆಗೆದುಕೊಂಡು ಬ್ಯಾಟರಿ ಚಾಲಿತ ರಿಕ್ಷಾವನ್ನು ಖರೀದಿಸಿದ್ದನು. ಇತ್ತೀಚೆಗೆ, ಡಾಕಾ ಸೌತ್ ಸಿಟಿ ಕಾರ್ಪೊರೇಷನ್ (ಡಿಎಸ್‌ಸಿಸಿ) ಯಾಂತ್ರಿಕೃತ, ಎಂಜಿನ್ ಚಾಲಿತ ಮತ್ತು ಬ್ಯಾಟರಿ ಚಾಲಿತ ರಿಕ್ಷಾ ಮತ್ತು ವ್ಯಾನ್‌ಗಳ ಚಲನೆಯನ್ನು ನಿಷೇಧಿಸಿತು. ‘05 ಅಕ್ಟೋಬರ್ 2020 ’ರಂದು ಡಿಎಸ್‌ಸಿಸಿ ನಡೆಸಿದ ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಫಜ್ಲೂರ್ ರೆಹಮಾನ್‌ರ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯನ್ನು ವರದಿ ಮಾಡುವ ಹೆಚ್ಚಿನ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫಜ್ಲೂರ್ ರಹಮಾನ್ ಅಳುವ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ, ಕೆಲವು ದಾನಿಗಳು ಫಜ್ಲೂರ್ ರಹಮಾನ್‌ರನ್ನು ಬೆಂಬಲಿಸುವುದಾಗಿ ಮುಂದೆ ಬಂದರು. ‘ಡಾಕಾ ಟ್ರಿಬ್ಯೂನ್’ ಪ್ರಕಟಿಸಿದ ಲೇಖನದ ಪ್ರಕಾರ, ಬಾಂಗ್ಲಾದೇಶ ಮೂಲದ ಇ-ಕಾಮರ್ಸ್ ಕಂಪನಿ ಶ್ವಾಪ್ನೋ ಎರಡು ರಿಕ್ಷಾಗಳನ್ನು ಫಜ್ಲೂರ್ ರಹಮಾನ್‌ಗೆ ದಾನ ಮಾಡಿದರು ಎಂದು ತಿಳಿದುಬಂದಿದೆ. ಅಪರಿಚಿತರೊಬ್ಬರು, ಫಜ್ಲೂರ್ ರಹಮಾನ್ ಜೊತೆಗೆ ಇತರ ಇಬ್ಬರು ರಿಕ್ಷಾ ಚಾಲಕರಿಗೆ 2 ರಿಕ್ಷಾಗಳನ್ನು ದಾನ ಮಾಡಿದ್ದಾರೆ ಎಂದು ‘ಟೈಮ್ಸ್ ನೌ’ ಸುದ್ದಿ ಲೇಖನದಲ್ಲಿ ವರದಿಯಾಗಿದೆ.

ಒಟ್ಟಾರೆ ಹೇಳುವುದಾದರೆ, ವೀಡಿಯೊದಲ್ಲಿ ಅಳುತ್ತಿರುವ ವ್ಯಕ್ತಿ ಬಾಂಗ್ಲಾದೇಶದ ಡಾಕಾದಲ್ಲಿ ರಿಕ್ಷಾ ಎಳೆಯುವ ಫಜ್ಲೂರ್ ರಹಮಾನ್. ‘05 ಅಕ್ಟೋಬರ್ 2020 ’ರಂದು ಡಾಕಾ ಮುನ್ಸಿಪಲ್ ಕಾರ್ಪೊರೇಷನ್ ಆತನ ರಿಕ್ಷಾವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಫಜ್ಲೂರ್ ರಹಮಾನ್ ಅಳತೊಡಗಿದ್ದಾನೆ. ಹಾಗಾಗಿ ಈ ಘಟನೆ ಭಾರತಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸ್ಪಷ್ಟವಾಗಿ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...