Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...