Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...