Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...