Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...