Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...