Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...