Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...