Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...