Homeಕರ್ನಾಟಕಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆ ನೆರವೇರಿದ ನಂತರ ರಾಮರಾಜ್ಯ ಶುರುವಾಗಿದೆ. ಕೇವಲ ಹಿಂದೂ ದೇವಾಲಯಗಳಿಂದ ಏಕೆ ಸರ್ಕಾರ ಕಾಣಿಕೆ ಹುಂಡಿ ಹಣ ತೆಗೆದುಕೊಳ್ಳುತ್ತದೆ? ಮುಸ್ಲಿಂ, ಕ್ರಿಶ್ಚಿಯನ್ ದೇವಾಲಯಗಳಿಂದ ಏಕೆ ಹಣ ತೆಗೆದುಕೊಳ್ಳುವುದಿಲ್ಲ? ಇದನ್ನು ದಿಟ್ಟವಾಗಿ ವಿರೋಧಿಸುತ್ತಿದ್ದಾರೆ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ರಾಮರಾಜ್ಯದಲ್ಲಿ ಬದಲಾವಣೆ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ, ಸರ್ಕಾರಿ ಅಧಿಕಾರಿಗಳು ಹುಂಡಿ ಹಣವನ್ನು ಸಂಗ್ರಹಿಸಲು ಬಂದಾಗ ಅವರು ಚರ್ಚ್ ಮತ್ತು ಮಸೀದಿಯಿಂದ ದೇಣಿಗೆ ಸಂಗ್ರಹಿಸಿ ಎಂದು ಒತ್ತಾಯಿಸಿದ್ದಾರೆ. ದಯವಿಟ್ಟು ಇದನ್ನು ವೈರಲ್ ಮಾಡಿ ಎಂಬ ಶೀರ್ಷಿಕೆಯಲ್ಲಿ ರಾಮರಾಜ್ಯ ಬಿಗಿನ್ಸ್ ಎಂಬ ಟ್ವಿಟ್ಟರ್‌ ಅಕೌಂಟ್‌ನಿಂದ ವಿಡಿಯೋವೊಂದನ್ನು ಆಗಸ್ಟ್ 8 ರಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅದ್ವೈತ ಕಾಲ ಎಂಬ ಟ್ವಿಟ್ಟರ್ ಅಕೌಂಟ್‌ನಿಂದ “ಕರ್ನಾಟಕದ ದೇವಸ್ಥಾನವೊಂದರಲ್ಲಿ ಕಾಣಿಕೆ ಹುಂಡಿಯನ್ನು ಅಧಿಕಾರಿಗಳು ಇಡಲು ಬಂದಾಗ ಅರ್ಚಕರು ತೀವ್ರವಾಗಿ ವಿರೋಧಿಸಿದ್ದಾರೆ. ಭಕ್ತರ ಕಾಣಿಕೆಯ ಹಣ ಹಿಂದೂಗಳಿಗೆ ಬಳಕೆಯಾಗದಿದ್ದರೆ ಹುಂಡಿ ಏಕೆ ಇಡಬೇಕು” ಎಂಬ ಶೀರ್ಷಿಕೆಯೊಂದಿಗೆ ಅದೇ ವಿಡಿಯೋವನ್ನು ಷೇರ್ ಮಾಡಲಾಗಿದೆ.

ಈ ಎರಡು ಪೋಸ್ಟ್‌ಗಳು ಸಾವಿರಾರು ಲೈಕ್‌ಗಳನ್ನು ಗಳಿಸಿದ್ದು, ತಲಾ ಐದು ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿವೆ. ಜೊತೆಗೆ ಫೇಸ್‌ಬುಕ್‌ನಲ್ಲಿಯೂ ಸಹ ಇದೇ ರೀತಿ ಆರೋಪಿಸಿ ಆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್:

ಈ ವಿಡಿಯೋ ಕರ್ನಾಟಕದ ಕೋಲಾರ ಟೌನ್‌ನಲ್ಲಿರುವ ಕೋಲಾರಮ್ಮ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಈ ಘಟನೆ ಅಕ್ಟೋಬರ್ 31, 2015 ರಂದು 5 ವರ್ಷಗಳ ಹಿಂದೆಯೇ ಸಂಭವಿಸಿದೆ. ಆದರೆ ಈ ವಿಡಿಯೋ ಪ್ರತಿ ವರ್ಷವೂ ಸಾಮಾಜಿಕ ಜಾಲಾತಾಣದಲ್ಲಿ ವಿವಿಧ ಶೀರ್ಷಿಕೆಗಳಲ್ಲಿ ವೈರಲ್ ಆಗುತ್ತಿದೆ.

ವಾಸ್ತವವೇನು?

ಕೋಲಾರಮ್ಮ ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಾಗಾಗಿ 2007ರಲ್ಲಿಯೇ ಅಲ್ಲಿ ಸರ್ಕಾರದ ವತಿಯಿಂದ ಕಾಣಿಕೆ ಹುಂಡಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಅಲ್ಲಿನ ಅರ್ಚಕರು ನಮಗೆ ಸರ್ಕಾರ ಸಂಬಳ ಕೊಡುವುದಿಲ್ಲ. ಭಕ್ತರು ಕೊಡುವ ಕಾಣಿಕೆಯಿಂದಲೇ ನಮ್ಮ ಜೀವನ ನಡೆಯುತ್ತದೆ ಹಾಗಾಗಿ ಹುಂಡಿ ಇಟ್ಟರೆ ಕಾಣಿಗೆ ನಮಗೆ ಸಿಗುವುದಿಲ್ಲ ಎಂದು ಹುಂಡಿಯನ್ನು ತೆರವುಗೊಳಿಸಿದ್ದರು. ವಿಷಯ ಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಅರ್ಚಕರ ವಿರುದ್ಧ ತೀರ್ಪು ನೀಡಿತ್ತಲ್ಲದೇ ಅಲ್ಲಿ ಕಾಣಿಕೆ ಹುಂಡಿ ಇಡಲು ಸರ್ಕಾರಕ್ಕೆ ಆದೇಶಿಸಿತ್ತು.

ಕೋರ್ಟ್ ಆದೇಶದನ್ವಯ ಆಗಿನ ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ ತ್ರಿಲೋಕಚಂದ್ರ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳು ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಡಲು ಮುಂದಾಗಿದ್ದರು. ಆಗ ಸಿಡಿದೆದ್ದ ಅರ್ಚಕರು “ನಾವು ಸತ್ತರೂ ಸರಿಯೇ ಹುಂಡಿಯನ್ನು ಇಡಲು ಬಿಡುವುದಿಲ್ಲ” ಎಂದು ಅದನ್ನು ಹೊರತಳ್ಳಲು ಯತ್ನಸಿದ್ದರು. ಅಧಿಕಾರಿಗಳು ಮತ್ತು ಅರ್ಚಕರ ನಡುವೆ ಜಟಾಪಟಿ ನಡೆದಿತ್ತು.

ಈ ದೇವಸ್ಥಾನ ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿದೆ. ಮುಜರಾಯಿ ಅಡಿಯಲ್ಲಿಲ್ಲ ನಾವು ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಈ ದೇವಸ್ಥಾನದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದೇವೆ. ನಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲ. ಭಕ್ತಾದಿಗಳು ಹಾಕುವ ತಟ್ಟೆ ಹಣದಲ್ಲೆ ಜೀವನ ಸಾಗಿಸುತ್ತಿದ್ದೇವೆ. 8 ಜನ ಅರ್ಚಕರಿದ್ದು ಸರ್ಕಾರ ಇಲ್ಲಿ ಹುಂಡಿ ಇಟ್ಟರೆ ನಾವು ಬದುಕುವುದೇಗೆ? ಸತ್ತರೂ ಸರಿಯೇ ಹುಂಡಿ ಇಡಲು ಬಿಡುವುದಿಲ್ಲ ಎಂದು ಪ್ರಧಾನ ಅರ್ಚಕ ಚಂದ್ರಶೇಖರ್ ದೀಕ್ಷಿತ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿಗಳು “ಅರ್ಚಕರನ್ನು ಮುಜರಾಯಿ ಇಲಾಖೆ ನೇಮಿಸಿಲ್ಲ. ಅವರಿಗೆ ಅನ್ಯಾಯವಾಗಿದ್ದರೆ ಕಾನೂನು ಹೋರಾಟ ನಡೆಸಲಿ. ಅದು ಬಿಟ್ಟು ಹೀಗೆ ಬೀದಿ ರಂಪಾಟ ಮಾಡುವುದು ಸರಿಯಲ್ಲ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈ ಕುರಿತು ಕನ್ನಡದ ದಿನಪತ್ರಿಕೆ ಪ್ರಜಾವಾಣಿ ವಿವರವಾಗಿ ವರದಿ ಮಾಡಿತ್ತು.

ಅಲ್ಲದೇ ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂದೆಯೇ ಹುಂಡಿ ಇಡಲು ಅರ್ಚಕರು ವಿರೋಧಿಸಿದ್ದೇಕೆ ಎಂದು ವಿವರಿಸಿ ವಿಡಿಯೋ ಷೇರ್ ಮಾಡಿದ್ದಾರೆ.

ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿರುವ ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ದೇವರ ಹುಂಡಿ ಇಡಬಾರದೆಂದು, ಭಕ್ತರು ಹಾಕುವ ಕಾಣಿಕೆಗಾಗಿ ಪೊಲೀಸರ ವಿರುದ್ದವೆ ರೌಡಿಗಳಂತೆ ಎಗರಾಡುತ್ತಿರುವ ದೇವಸ್ಥಾನಗಳಲ್ಲಿ 90% ಮೀಸಲಾತಿ ಪಡೆದ ಫಲಾನುಭವಿಗಳು, ಇವರಿಗೆ ಬಿಜೆಪಿ ಮೋದಿ ಸರ್ಕಾರ ಮತ್ತೆ ಎಕ್ಸ್ ಟ್ರಾ 10% ಮೀಸಲಾತಿ ಕೊಡುತ್ತಿದೆ.ಇದು ನ್ಯಾಯ ಸಮ್ಮತವೇ!!!???ಮರಿದೇವಯ್ಯ.ಎಸ್ಅಧ್ಯಕ್ಷರುಮೈಸೂರು ವಿ.ವಿ ಸಂಶೋಧಕರ ಸಂಘ

Posted by Maridevu Devu on Monday, July 27, 2020

ಒಟ್ಟಿನಲ್ಲಿ ತಮ್ಮ ಜೀವನಕ್ಕೆ ಅನ್ಯಾಯವಾಗುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ 5 ವರ್ಷದಷ್ಟು ಹಳೆಯ ವಿಡಿಯೋವನ್ನು ರಾಮಮಂದಿರ ಶಿಲಾನ್ಯಾಸಕ್ಕೆ ಸಂಬಂಧಿಸಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...