Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೂ ಮೊದಲು ಇದ್ದ ಕಾಶ್ಮೀರದ ಪರಿಸ್ಥಿತಿಗೂ ಮತ್ತು ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕಾಶ್ಮೀರದ ಪರಿಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಇದೆ ನೋಡಿ ಎಂಬ ಹೇಳಿಕೆಯೊಂದಿಗೆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸ್ವಾತಂತ್ಯ್ರ ಬಂದಾಗಿನಿಂದ ಕಾಶ್ಮೀರ ಕುರಿತು ಪ್ರಮುಖ ರಾಜಕೀಯ ಪಕ್ಷಗಳ ನಿಲುವುಗಳು ಮತ್ತು ಸಮಸ್ಯೆಗಳನ್ನು ನೋಡುವ ರೀತಿಯಿಂದಾಗಿ ಕಾಶ್ಮೀರ ಎಂಬ ಕಣಿವೆ ರಾಜ್ಯ ಇಂದಿಗೂ ಉರಿವ ಕೆಂಡದಂತೆ ಭಾಸವಾಗುತ್ತಿದೆ. ಇದರ ನಡುವೆ ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಹಿಂಸಾತ್ಮಕವಾಗಿ ನಡೆಸಿಕೊಳ್ಳಲಾಗಿದೆ, ಹತ್ಯೆ ಮಾಡಲಾಗಿದೆ ಎಂದು ಕತೆಯನ್ನ ಹೇಳುವ ‘ದ ಕಾಶ್ಮೀರ್ ಫೈಲ್ಸ್‌’ ಎಂಬ ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನು ಓದಿರಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ 

ವೈರಲ್ ಪೋಸ್ಟ್‌ನಲ್ಲಿ ಇರುವ ವಿಡಿಯೊದಲ್ಲಿ ಸೇನೆಯ ವಾಹನಗಳಿಗೆ ತಡೆಯೊಡ್ಡಿ, ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಸೇನಾವಾಹನವನ್ನು ಹಿಮ್ಮೆಟ್ಟಿಸುವ ಕ್ಲಿಪ್‌ಗಳು ಮತ್ತೊಂದು ಕಡೆ ಸೇನಾ ವಾಹನದ ಮುಂಭಾಗಕ್ಕೆ ವ್ಯಕ್ತಿಯೊಬ್ಬನನ್ನು ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯಗಳನ್ನು ವೈರಲ್ ವೀಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಈ ವೈರಲ್ ವಿಡಿಯೊದಲ್ಲಿ ಕಾಣುತ್ತಿರುವ  ಘಟನೆಗಳು ಯಾವ  ಸಂದರ್ಭಗಳಲ್ಲಿ ನಡೆದಿದೆ ಎಂದು ತಿಳಿದುಕೊಳ್ಳುವ ಮೂಲಕ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 ಫ್ಯಾಕ್ಟ್‌ಚೆಕ್ 

ವೀಡಿಯೊದ ಸ್ಕ್ರೀನ್‌ಶಾಟ್‌ಗಳ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯ ಮೊದಲು ಎಂದು ಹೇಳಿಕೊಳ್ಳುವ ದೃಶ್ಯಗಳು ಸಹ  2019 ರಲ್ಲಿ ಸೆರೆಯಾದ ದೃಶ್ಯಗಳಾಗಿವೆ.

31 ಮೇ 2019 ರಂದು ಶ್ರೀನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸುಕುಧಾರಿಗಳು ಜಮ್ಮು ಕಾಶ್ಮೀರದ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಿ ವಾಹನವನ್ನು ತಡೆಯುತ್ತಿರುವ ದೃಶ್ಯಗಳು ಎಂಬ ಮಾಹಿತಿ ಲಭ್ಯವಾಗಿದೆ. ಈ ದೃಶ್ಯಗಳನ್ನು ಸೆರೆ ಹಿಡಿದ ವ್ಯಕ್ತಿಯು ಅಸೋಸಿಯೇಟೆಡ್ ಪ್ರೆಸ್‌ನಲ್ಲಿ ಕೆಲಸ ಮಾಡಿದ ದಾರ್ ಯಾಸಿನ್ ಎಂದು ತಿಳಿದು ಬಂದಿದೆ. ವಾಹನದ ಬಾನೆಟ್ ಮೇಲೆ ಹಾರಿದ ವ್ಯಕ್ತಿಯ ಚಿತ್ರವನ್ನು ಸರೆ ಹಿಡಿದ ಕಾರಣಕ್ಕೆ ವಿಶೇಷ ಫೋಟೋಗ್ರಫಿ ಎಂದು ಗುರುತಿಸಿ ಅವರಿಗೆ 2020 ರಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಶ್ರೀನಗರದಲ್ಲಿ ಈ ಘಟನೆ ಸಂಭವಿಸುವ ಕೆಲವು ದಿನಗಳ ಮೊದಲು, ಬಿಜೆಪಿ ಸರ್ಕಾರವು ಪೂರ್ಣ ಬಹುಮತದೊಂದಿಗೆ ಎರಡನೆ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಸಮಯದಲ್ಲಿ (2019) ಜಮ್ಮು ಕಾಶ್ಮೀರದಲ್ಲಿ  ರಾಷ್ಟ್ರಪತಿ ಆಳ್ವಿಕೆಯಲ್ಲಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಮೇ 31, 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸುಕುಧಾರಿ ಕಾಶ್ಮೀರಿ ಪ್ರತಿಭಟನಾಕಾರನು ಭಾರತೀಯ ಪೋಲೀಸರ ಶಸ್ತ್ರಸಜ್ಜಿತ ವಾಹನದ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದಾಗ ಅದರ ಮೇಲೆ ಹಾರಿದ್ದಾನೆ. ಈ ದೃಶ್ಯವನ್ನು ದಾರ್ ಯಾಸಿನ್ ಸೆರೆ ಹಿಡಿದಿದ್ದರು.

ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿಹಾಕಿರುವ ದೃಶ್ಯವು 2017 ರದ್ದು. ಸುದ್ದಿ ವರದಿಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕಟ್ಟಲಾಗಿತ್ತು. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಲ್ಲು ಎಸೆಯುವವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟುವ ಮೂಲಕ ಕಲ್ಲು ತೂರಾಟ ಮಾಡುತ್ತಿದ್ದ ಪ್ರತಿಭಟನಕಾರರಿಂದ ರಕ್ಷಣೆ ಪಡೆಯುವ ಸಲುವಾಗಿ ‘ಮಾನವ ಗುರಾಣಿ’ಯಾಗಿ ಬಳಸಿಕೊಂಡಿದ್ದರು.

ಈ ಘಟನೆಯು  ಏಪ್ರಿಲ್ 2017 ರಲ್ಲಿ ನಡೆದು ವಿಡಿಯೊ ವೈರಲ್ ಆಗಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. 2017 ರ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವು  ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿತ್ತು.

ಮಿಲಿಟರಿ ಸಮವಸ್ತ್ರದಲ್ಲಿರುವ ಸಿಬ್ಬಂದಿ ಮೂವರನ್ನು ವಿಚಾರಣೆ ನಡೆಸುತ್ತಿರುವ ದೃಶ್ಯಗಳನ್ನು ಕನಿಷ್ಠ 2017 ರಿಂದ ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ (ಇಲ್ಲಿ ಮತ್ತು ಇಲ್ಲಿ ಅದನ್ನು ನೋಡಬಹುದು).

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಡಿಯೋದಲ್ಲಿರುವ ಘಟನೆಗಳು ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿವೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯು ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...