Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೂ ಮೊದಲು ಇದ್ದ ಕಾಶ್ಮೀರದ ಪರಿಸ್ಥಿತಿಗೂ ಮತ್ತು ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕಾಶ್ಮೀರದ ಪರಿಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಇದೆ ನೋಡಿ ಎಂಬ ಹೇಳಿಕೆಯೊಂದಿಗೆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸ್ವಾತಂತ್ಯ್ರ ಬಂದಾಗಿನಿಂದ ಕಾಶ್ಮೀರ ಕುರಿತು ಪ್ರಮುಖ ರಾಜಕೀಯ ಪಕ್ಷಗಳ ನಿಲುವುಗಳು ಮತ್ತು ಸಮಸ್ಯೆಗಳನ್ನು ನೋಡುವ ರೀತಿಯಿಂದಾಗಿ ಕಾಶ್ಮೀರ ಎಂಬ ಕಣಿವೆ ರಾಜ್ಯ ಇಂದಿಗೂ ಉರಿವ ಕೆಂಡದಂತೆ ಭಾಸವಾಗುತ್ತಿದೆ. ಇದರ ನಡುವೆ ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಹಿಂಸಾತ್ಮಕವಾಗಿ ನಡೆಸಿಕೊಳ್ಳಲಾಗಿದೆ, ಹತ್ಯೆ ಮಾಡಲಾಗಿದೆ ಎಂದು ಕತೆಯನ್ನ ಹೇಳುವ ‘ದ ಕಾಶ್ಮೀರ್ ಫೈಲ್ಸ್‌’ ಎಂಬ ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನು ಓದಿರಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ 

ವೈರಲ್ ಪೋಸ್ಟ್‌ನಲ್ಲಿ ಇರುವ ವಿಡಿಯೊದಲ್ಲಿ ಸೇನೆಯ ವಾಹನಗಳಿಗೆ ತಡೆಯೊಡ್ಡಿ, ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಸೇನಾವಾಹನವನ್ನು ಹಿಮ್ಮೆಟ್ಟಿಸುವ ಕ್ಲಿಪ್‌ಗಳು ಮತ್ತೊಂದು ಕಡೆ ಸೇನಾ ವಾಹನದ ಮುಂಭಾಗಕ್ಕೆ ವ್ಯಕ್ತಿಯೊಬ್ಬನನ್ನು ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯಗಳನ್ನು ವೈರಲ್ ವೀಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಈ ವೈರಲ್ ವಿಡಿಯೊದಲ್ಲಿ ಕಾಣುತ್ತಿರುವ  ಘಟನೆಗಳು ಯಾವ  ಸಂದರ್ಭಗಳಲ್ಲಿ ನಡೆದಿದೆ ಎಂದು ತಿಳಿದುಕೊಳ್ಳುವ ಮೂಲಕ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 ಫ್ಯಾಕ್ಟ್‌ಚೆಕ್ 

ವೀಡಿಯೊದ ಸ್ಕ್ರೀನ್‌ಶಾಟ್‌ಗಳ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯ ಮೊದಲು ಎಂದು ಹೇಳಿಕೊಳ್ಳುವ ದೃಶ್ಯಗಳು ಸಹ  2019 ರಲ್ಲಿ ಸೆರೆಯಾದ ದೃಶ್ಯಗಳಾಗಿವೆ.

31 ಮೇ 2019 ರಂದು ಶ್ರೀನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸುಕುಧಾರಿಗಳು ಜಮ್ಮು ಕಾಶ್ಮೀರದ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಿ ವಾಹನವನ್ನು ತಡೆಯುತ್ತಿರುವ ದೃಶ್ಯಗಳು ಎಂಬ ಮಾಹಿತಿ ಲಭ್ಯವಾಗಿದೆ. ಈ ದೃಶ್ಯಗಳನ್ನು ಸೆರೆ ಹಿಡಿದ ವ್ಯಕ್ತಿಯು ಅಸೋಸಿಯೇಟೆಡ್ ಪ್ರೆಸ್‌ನಲ್ಲಿ ಕೆಲಸ ಮಾಡಿದ ದಾರ್ ಯಾಸಿನ್ ಎಂದು ತಿಳಿದು ಬಂದಿದೆ. ವಾಹನದ ಬಾನೆಟ್ ಮೇಲೆ ಹಾರಿದ ವ್ಯಕ್ತಿಯ ಚಿತ್ರವನ್ನು ಸರೆ ಹಿಡಿದ ಕಾರಣಕ್ಕೆ ವಿಶೇಷ ಫೋಟೋಗ್ರಫಿ ಎಂದು ಗುರುತಿಸಿ ಅವರಿಗೆ 2020 ರಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಶ್ರೀನಗರದಲ್ಲಿ ಈ ಘಟನೆ ಸಂಭವಿಸುವ ಕೆಲವು ದಿನಗಳ ಮೊದಲು, ಬಿಜೆಪಿ ಸರ್ಕಾರವು ಪೂರ್ಣ ಬಹುಮತದೊಂದಿಗೆ ಎರಡನೆ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಸಮಯದಲ್ಲಿ (2019) ಜಮ್ಮು ಕಾಶ್ಮೀರದಲ್ಲಿ  ರಾಷ್ಟ್ರಪತಿ ಆಳ್ವಿಕೆಯಲ್ಲಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಮೇ 31, 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸುಕುಧಾರಿ ಕಾಶ್ಮೀರಿ ಪ್ರತಿಭಟನಾಕಾರನು ಭಾರತೀಯ ಪೋಲೀಸರ ಶಸ್ತ್ರಸಜ್ಜಿತ ವಾಹನದ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದಾಗ ಅದರ ಮೇಲೆ ಹಾರಿದ್ದಾನೆ. ಈ ದೃಶ್ಯವನ್ನು ದಾರ್ ಯಾಸಿನ್ ಸೆರೆ ಹಿಡಿದಿದ್ದರು.

ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿಹಾಕಿರುವ ದೃಶ್ಯವು 2017 ರದ್ದು. ಸುದ್ದಿ ವರದಿಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕಟ್ಟಲಾಗಿತ್ತು. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಲ್ಲು ಎಸೆಯುವವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟುವ ಮೂಲಕ ಕಲ್ಲು ತೂರಾಟ ಮಾಡುತ್ತಿದ್ದ ಪ್ರತಿಭಟನಕಾರರಿಂದ ರಕ್ಷಣೆ ಪಡೆಯುವ ಸಲುವಾಗಿ ‘ಮಾನವ ಗುರಾಣಿ’ಯಾಗಿ ಬಳಸಿಕೊಂಡಿದ್ದರು.

ಈ ಘಟನೆಯು  ಏಪ್ರಿಲ್ 2017 ರಲ್ಲಿ ನಡೆದು ವಿಡಿಯೊ ವೈರಲ್ ಆಗಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. 2017 ರ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವು  ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿತ್ತು.

ಮಿಲಿಟರಿ ಸಮವಸ್ತ್ರದಲ್ಲಿರುವ ಸಿಬ್ಬಂದಿ ಮೂವರನ್ನು ವಿಚಾರಣೆ ನಡೆಸುತ್ತಿರುವ ದೃಶ್ಯಗಳನ್ನು ಕನಿಷ್ಠ 2017 ರಿಂದ ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ (ಇಲ್ಲಿ ಮತ್ತು ಇಲ್ಲಿ ಅದನ್ನು ನೋಡಬಹುದು).

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಡಿಯೋದಲ್ಲಿರುವ ಘಟನೆಗಳು ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿವೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯು ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...