Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೂ ಮೊದಲು ಇದ್ದ ಕಾಶ್ಮೀರದ ಪರಿಸ್ಥಿತಿಗೂ ಮತ್ತು ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕಾಶ್ಮೀರದ ಪರಿಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಇದೆ ನೋಡಿ ಎಂಬ ಹೇಳಿಕೆಯೊಂದಿಗೆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸ್ವಾತಂತ್ಯ್ರ ಬಂದಾಗಿನಿಂದ ಕಾಶ್ಮೀರ ಕುರಿತು ಪ್ರಮುಖ ರಾಜಕೀಯ ಪಕ್ಷಗಳ ನಿಲುವುಗಳು ಮತ್ತು ಸಮಸ್ಯೆಗಳನ್ನು ನೋಡುವ ರೀತಿಯಿಂದಾಗಿ ಕಾಶ್ಮೀರ ಎಂಬ ಕಣಿವೆ ರಾಜ್ಯ ಇಂದಿಗೂ ಉರಿವ ಕೆಂಡದಂತೆ ಭಾಸವಾಗುತ್ತಿದೆ. ಇದರ ನಡುವೆ ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಹಿಂಸಾತ್ಮಕವಾಗಿ ನಡೆಸಿಕೊಳ್ಳಲಾಗಿದೆ, ಹತ್ಯೆ ಮಾಡಲಾಗಿದೆ ಎಂದು ಕತೆಯನ್ನ ಹೇಳುವ ‘ದ ಕಾಶ್ಮೀರ್ ಫೈಲ್ಸ್‌’ ಎಂಬ ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನು ಓದಿರಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ 

ವೈರಲ್ ಪೋಸ್ಟ್‌ನಲ್ಲಿ ಇರುವ ವಿಡಿಯೊದಲ್ಲಿ ಸೇನೆಯ ವಾಹನಗಳಿಗೆ ತಡೆಯೊಡ್ಡಿ, ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಸೇನಾವಾಹನವನ್ನು ಹಿಮ್ಮೆಟ್ಟಿಸುವ ಕ್ಲಿಪ್‌ಗಳು ಮತ್ತೊಂದು ಕಡೆ ಸೇನಾ ವಾಹನದ ಮುಂಭಾಗಕ್ಕೆ ವ್ಯಕ್ತಿಯೊಬ್ಬನನ್ನು ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯಗಳನ್ನು ವೈರಲ್ ವೀಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಈ ವೈರಲ್ ವಿಡಿಯೊದಲ್ಲಿ ಕಾಣುತ್ತಿರುವ  ಘಟನೆಗಳು ಯಾವ  ಸಂದರ್ಭಗಳಲ್ಲಿ ನಡೆದಿದೆ ಎಂದು ತಿಳಿದುಕೊಳ್ಳುವ ಮೂಲಕ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 ಫ್ಯಾಕ್ಟ್‌ಚೆಕ್ 

ವೀಡಿಯೊದ ಸ್ಕ್ರೀನ್‌ಶಾಟ್‌ಗಳ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯ ಮೊದಲು ಎಂದು ಹೇಳಿಕೊಳ್ಳುವ ದೃಶ್ಯಗಳು ಸಹ  2019 ರಲ್ಲಿ ಸೆರೆಯಾದ ದೃಶ್ಯಗಳಾಗಿವೆ.

31 ಮೇ 2019 ರಂದು ಶ್ರೀನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸುಕುಧಾರಿಗಳು ಜಮ್ಮು ಕಾಶ್ಮೀರದ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಿ ವಾಹನವನ್ನು ತಡೆಯುತ್ತಿರುವ ದೃಶ್ಯಗಳು ಎಂಬ ಮಾಹಿತಿ ಲಭ್ಯವಾಗಿದೆ. ಈ ದೃಶ್ಯಗಳನ್ನು ಸೆರೆ ಹಿಡಿದ ವ್ಯಕ್ತಿಯು ಅಸೋಸಿಯೇಟೆಡ್ ಪ್ರೆಸ್‌ನಲ್ಲಿ ಕೆಲಸ ಮಾಡಿದ ದಾರ್ ಯಾಸಿನ್ ಎಂದು ತಿಳಿದು ಬಂದಿದೆ. ವಾಹನದ ಬಾನೆಟ್ ಮೇಲೆ ಹಾರಿದ ವ್ಯಕ್ತಿಯ ಚಿತ್ರವನ್ನು ಸರೆ ಹಿಡಿದ ಕಾರಣಕ್ಕೆ ವಿಶೇಷ ಫೋಟೋಗ್ರಫಿ ಎಂದು ಗುರುತಿಸಿ ಅವರಿಗೆ 2020 ರಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಶ್ರೀನಗರದಲ್ಲಿ ಈ ಘಟನೆ ಸಂಭವಿಸುವ ಕೆಲವು ದಿನಗಳ ಮೊದಲು, ಬಿಜೆಪಿ ಸರ್ಕಾರವು ಪೂರ್ಣ ಬಹುಮತದೊಂದಿಗೆ ಎರಡನೆ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಸಮಯದಲ್ಲಿ (2019) ಜಮ್ಮು ಕಾಶ್ಮೀರದಲ್ಲಿ  ರಾಷ್ಟ್ರಪತಿ ಆಳ್ವಿಕೆಯಲ್ಲಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಮೇ 31, 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸುಕುಧಾರಿ ಕಾಶ್ಮೀರಿ ಪ್ರತಿಭಟನಾಕಾರನು ಭಾರತೀಯ ಪೋಲೀಸರ ಶಸ್ತ್ರಸಜ್ಜಿತ ವಾಹನದ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದಾಗ ಅದರ ಮೇಲೆ ಹಾರಿದ್ದಾನೆ. ಈ ದೃಶ್ಯವನ್ನು ದಾರ್ ಯಾಸಿನ್ ಸೆರೆ ಹಿಡಿದಿದ್ದರು.

ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿಹಾಕಿರುವ ದೃಶ್ಯವು 2017 ರದ್ದು. ಸುದ್ದಿ ವರದಿಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕಟ್ಟಲಾಗಿತ್ತು. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಲ್ಲು ಎಸೆಯುವವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟುವ ಮೂಲಕ ಕಲ್ಲು ತೂರಾಟ ಮಾಡುತ್ತಿದ್ದ ಪ್ರತಿಭಟನಕಾರರಿಂದ ರಕ್ಷಣೆ ಪಡೆಯುವ ಸಲುವಾಗಿ ‘ಮಾನವ ಗುರಾಣಿ’ಯಾಗಿ ಬಳಸಿಕೊಂಡಿದ್ದರು.

ಈ ಘಟನೆಯು  ಏಪ್ರಿಲ್ 2017 ರಲ್ಲಿ ನಡೆದು ವಿಡಿಯೊ ವೈರಲ್ ಆಗಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. 2017 ರ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವು  ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿತ್ತು.

ಮಿಲಿಟರಿ ಸಮವಸ್ತ್ರದಲ್ಲಿರುವ ಸಿಬ್ಬಂದಿ ಮೂವರನ್ನು ವಿಚಾರಣೆ ನಡೆಸುತ್ತಿರುವ ದೃಶ್ಯಗಳನ್ನು ಕನಿಷ್ಠ 2017 ರಿಂದ ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ (ಇಲ್ಲಿ ಮತ್ತು ಇಲ್ಲಿ ಅದನ್ನು ನೋಡಬಹುದು).

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಡಿಯೋದಲ್ಲಿರುವ ಘಟನೆಗಳು ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿವೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯು ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...