Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...