Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...