Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...