Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...