Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...