Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...