Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

- Advertisement -
- Advertisement -

ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅವರ ಸಮಾನತೆ ಬಗೆಗಿನ, ವೈಚಾರಿಕತೆ ಕುರಿತ ನಿಲುವುಗಳನ್ನು ಸ್ಮರಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಅಂಬೇಡ್ಕರ್ ಅವರು ಶ್ರೀ ಶ್ರೀಧರ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವ ಅಪರೂಪದ ಫೋಟೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಪೋಸ್ಟರ್‌ ಅನ್ನು ಹಂಚುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಸ್ವಾಮೀಜಿಗಳಿಂದ ಆಶಿರ್ವಾದ ಪಡೆದರು ಎಂಬ ಸಂದೇಶ ಹರಡಲು ಯತ್ನಿಸಲಾಗುತ್ತಿದೆ. ಅಂಬೇಡ್ಕರ್ ಅವರು ನಿಜಕ್ಕೂ ಶ್ರೀಧರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡಿದಿದ್ದಾರೆಯೆ ಎಂದು  ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ರೀತಿಯ ಚಿತ್ರಗಳನ್ನು ಬಿಜೆಪಿ ಬೆಂಬಲಿಗರೇ ಹೆಚ್ಚಾಗಿ ಹಂಚುತ್ತಿದ್ದಾರೆ. ಅವರುಗಳನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ ಚೆಕ್

ಆರ್ಯವಾರ್ತಾ ಎಂಬ  ಫೇಸ್‌ಬುಕ್ ಪೇಜ್‌ನಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವರದಹಳ್ಳಿಯಲ್ಲಿರುವ ಆಶ್ರಮಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿ ಶ್ರೀ ಶ್ರೀಧರ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲಿರುವ ಫೋಟೊದಲ್ಲಿ ಕನ್ನಡಕ ಧರಿಸಿರುವ ವ್ಯಕ್ತಿಯೊಬ್ಬರಿಗೆ ಶ್ರೀಧರ ಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದು, ಜೊತೆಯಲ್ಲಿ ಮತ್ತೊಬ್ಬರು ಕುಳಿತಿರುವುದನ್ನು ಕಾಣಬಹುದು.

ಪೋಟೋದಲ್ಲಿರುವ ವ್ಯಕ್ತಿ ಅಂಬೇಡ್ಕರ್ ಅಲ್ಲ

ಅಂಬೇಡ್ಕರ್ ಅವರ ಕರ್ನಾಟಕಕ್ಕೆ ಭೇಟಿ ನೀಡಿರುವ ಸ್ಥಳಗಳ ಬಗ್ಗೆ ಪರಿಶೀಲಿಸಿದಾಗ ಫೋಸ್ಟ್‌ನಲ್ಲಿ ಉಲ್ಲೇಖಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಭೇಟಿ ನೀಡಿರುವ ಯಾವ ಉಲ್ಲೇಖ ಕಂಡುಬಂದಿಲ್ಲ.

ನಾನುಗೌರಿ.ಕಾಂ ವರದಪುರ ಭಗವಾನ್ ಶ್ರೀ ಶ್ರೀಧರಸ್ವಾಮಿ ಆಶ್ರಮಕ್ಕೆ ಕರೆ ಮಾಡಿ ಈ ಕುರಿತು ವಿಚಾರಿಸಿದಾಗ ಆಶ್ರಮದ ಟ್ರಸ್ಟಿಯೊಬ್ಬರು ಮಾತನಾಡಿ, “ಅಂಬೇಡ್ಕರ್ ಅವರು ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬುದು ಸುಳ್ಳು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ಫೋಟೋದಲ್ಲಿ ಇರುವುದು ಅಂಬೇಡ್ಕರ್ ಅಲ್ಲ. ಈ ಹಿಂದೆಯೂ ಇದೇ ರೀತಿ ಸುಳ್ಳು ಸುದ್ದಿ ಹರಡಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ಹಾಗಿದ್ದರೆ ಫೋಟೋದಲ್ಲಿ ಕಾಣುವ ವ್ಯಕ್ತಿ ಯಾರು?

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿರುವ ಫೋಟೋದಲ್ಲಿ ಇರುವ ವ್ಯಕ್ತಿ ಅಂಬೇಡ್ಕರ್ ಅಲ್ಲ. ಅಂಬೇಡ್ಕರ್ ರೀತಿ ಕಾಣುವ ಮಹಾರಾಷ್ಟ್ರದ ಸುಪ್ರಸಿದ್ಧ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು. ಆತ್ರೆಯವರ ಮತ್ತು ಭಗವಾನ್ ಶ್ರೀಧರರ ಭೇಟಿಯ ಪೋಟೋ ಮತ್ತು ಲೇಖನ ಸದ್ಗುರು ಭಗವಾನ್ ಶ್ರೀ ಶ್ರೀಧರ ಚರಿತ್ರೆಯಲ್ಲಿ ಪ್ರಕಟವಾಗಿದೆ. ಅದನ್ನು ಇಲ್ಲಿ ನೋಡಬಹುದು.

ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು
ಸದ್ಗುರು ಭಗವಾನರು ಅತ್ರೆಯವರಿಗೆ ಆಶೀರ್ವಾದ ನೀಡುತ್ತಿರುವುದು

ಅಂಬೇಡ್ಕರ್‌ರವರ ಕರ್ನಾಟಕ ಭೇಟಿ

ಕರ್ನಾಟಕಕ್ಕೆ ಅಂಬೇಡ್ಕರ್ ಮೊದಲ ಬಾರಿಗೆ ಭೇಟಿ ನೀಡಿದ್ದು 1925 ನವೆಂಬರ್ 11 ಮತ್ತು 12 ರಂದು. ಬೆಳಗಾವಿಯಲ್ಲಿ ನಡೆದ ಬಹಿಷ್ಕ್ರತ ಹಿತಕಾರಿಣಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ನಂತರ ಅವರು ಕರ್ನಾಟಕಕ್ಕೆ ಸುಮಾರು 7 ಬಾರಿ ಭೇಟಿ ನೀಡಿದ್ದಾರೆ (ಭೇಟಿ ನೀಡಿದ್ದ ವಿವರವನ್ನು ಈ ಲೇಖನದಲ್ಲಿ ನೋಡಬಹುದು) ಆದರೆ ಈ ಭೇಟಿಗಳಲ್ಲಿ ಎಲ್ಲಯೂ ಶಿವಮೊಗ್ಗದ ಸಾಗರಕ್ಕೆ ಬಂದಿದ್ದರ ಉಲ್ಲೇಖವಿಲ್ಲ.

ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು
ಸದ್ಗುರು ಭಗವಾನ್ ಶ್ರೀ ಶ್ರೀಧರಸ್ವಾಮಿ ಅವರೊಂದಿಗೆ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದಿದ್ದ ಅಂಬೇಡ್ಕರ್

ಅಂಬೇಡ್ಕರ್‌ರವರು ತಮ್ಮ ಜೀವಮಾನ ಪೂರ್ತಿ ಹಿಂದೂ ಧರ್ಮದ ಜಾತೀಯತೆ, ಅಸಮಾನತೆ, ಕಪಟ ಆಚಾರಗಳನ್ನು ವಿರೋಧಿಸಿದ್ದರು. ಹಿಂದೂವಾಗಿ ಹುಟ್ಟಿರುವೆ ಹಿಂದೂವಾಗಿ ಮಾತ್ರ ಸಾಯಲಾರೆ ಎಂದು ಘೋಷಿಸಿದ್ದರು. ಅದರಂತೆಯೇ ಅವರು ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿ 1956 ರಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸೇರಿದ್ದರು. ಹಾಗಾಗಿ ಅವರು ಯಾವ ಹಿಂದೂ ಸ್ವಾಮೀಜಿಯಿಂದಲೂ ಆರ್ಶಿವಾದ ಪಡೆದಿರಲಿಲ್ಲ.

ಹಾಗಾಗಿ ಈ ಎಲ್ಲಾ ಆಧಾರದಲ್ಲಿ ಫೋಟೋದಲ್ಲಿ ಭಗವಾನ್ ಶ್ರೀ ಶ್ರೀಧರಸ್ವಾಮಿಗಳೊಂದಿಗೆ ಆಶೀರ್ವಾದ ಪಡೆಯುತ್ತಿರುವ ವ್ಯಕ್ತಿಯು ಅಂಬೇಡ್ಕರ್ ಅಲ್ಲ ಮರಾಠ ಪತ್ರಿಕೆಯ ಸಂಪಾದಕರಾದ ಆಚಾಯ೯ ಆತ್ರೆಯವರು ಎಂದು ಖಚಿತವಾಗಿ ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...